ವರುಣಾ ಹೋಬಳಿಯ ಆಯರಹಳ್ಳಿ ಗ್ರಾಮದವರಾದ ರಂಗಸ್ವಾಮಿ ಮೈಸೂರಿನಿಂದ ತಮ್ಮ ಗ್ರಾಮಕ್ಕೆ ಹೋಗುವಾಗ ಆಯತಪ್ಪಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಯಾರೂ ನೆರವಿಗೆ ಬರಲಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಲೆ ಮಹದೇಶ್ವರಬೆಟ್ಟದಿಂದ ವಾಪಸ್ ಬರುತ್ತಿದ್ದ ಐಜಿಪಿ ವಿಫುಲ್ಕುಮಾರ್ ಗಾಯಾಳುವನ್ನು ಸಮೀಪದ ಕಾವೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.