ಮೈಸೂರು: ಐಎಎಸ್ ಅಧಿಕಾರಿ ಬಿ.ಶರತ್ ಅವರು ಅನಾರೋಗ್ಯದ ಕಾರಣ ಇಲ್ಲಿ ಕುವೆಂಪುನಗರದ ಭಾನವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಅ.17ರಂದು ಆಸ್ಪತ್ರೆಗೆ ದಾಖಲಾ ಗಿದ್ದಾರೆ. ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಶರತ್ ಅವರ ಆಪ್ತ ಮೂಲಗಳು ತಿಳಿಸಿವೆ
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವರನ್ನು ಕೇವಲ 29 ದಿನಗಳಲ್ಲಿ ವರ್ಗಾವಣೆ ಮಾಡಲಾಗಿತ್ತು. ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ (ಸಿಎಟಿ) ಅ.23ಕ್ಕೆ ಮುಂದೂಡಿದೆ.