<p><strong>ಮೈಸೂರು: </strong>ನಾಡ ದೇವತೆ ಚಾಮುಂಡೇಶ್ವರಿಯ ವರ್ಧಂತ್ಯುತ್ಸವ ಶುಕ್ರವಾರ ಶ್ರದ್ಧಾ ಭಕ್ತಿಯಿಂದ ಚಾಮುಂಡಿಬೆಟ್ಟದಲ್ಲಿ ನೆರವೇರಿತು.</p>.<p>ಆಷಾಢ ಮಾಸದ ಕೃಷ್ಣ ಪಕ್ಷದ ರೇವತಿ ನಕ್ಷತ್ರದಲ್ಲಿ ಪ್ರತಿ ವರ್ಷ ನಡೆಯುವ ಈ ಉತ್ಸವಕ್ಕೆ ಕೋವಿಡ್ ಕಾರಣದಿಂದ ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೂ, ಹೆಚ್ಚಿನ ಸಂಖ್ಯೆಯಲ್ಲಿ ಗಣ್ಯ ವ್ಯಕ್ತಿಗಳು ಇಲ್ಲಿಗೆ ಬಂದು ದರ್ಶನ ಪಡೆದರು.</p>.<p>ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಷಿಕಾ ಕುಮಾರಿ ದಂಪತಿ ಭೇಟಿ ನೀಡಿ ಉತ್ಸವ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಮಂಗಳವಾದ್ಯಗಳ ಸಮೇತ ಉತ್ಸವ ಮೂರ್ತಿಯ ಮೆರವಣಿಗೆಯು ಪಲ್ಲಕ್ಕಿಯಲ್ಲಿ ದೇಗುಲದ ಒಳಾಂಗಣ<br />ದಲ್ಲಿ ನೆರವೇರಿತು. ಹಣ್ಣು, ಕಾಯಿಗ<br />ಳನ್ನು ಭಕ್ತರು ಸಮರ್ಪಿಸಿದರು. ರಾಜವಂಶಸ್ಥರು ದೇವರ ಮೂರ್ತಿಯ ಮುಂದೆ ಈಡುಗಾಯಿ ಒಡೆಯುವ ಮೂಲಕ ಉತ್ಸವ ಸಂಪನ್ನಗೊಂಡಿತು.</p>.<p>ದೇಗುಲದ ಹೊರಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಚಾಮುಂಡಿಬೆಟ್ಟದ ಗ್ರಾಮದವರಿಗೆ ಮುಕ್ತ ಪ್ರವೇಶ ಇದ್ದುದ್ದು, ಹಾಗೂ ಹೊರಗಿನಿಂದ ಬಂದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದುದ್ದರಿಂದ ಜನಜಂಗುಳಿ ಹೆಚ್ಚಾಗಿತ್ತು.</p>.<p>ಸಂಜೆ 7.15 ಗಂಟೆಗೆ ತೆರೆಯುತ್ತಿದ್ದ ದೇಗುಲ ಶುಕ್ರವಾರ ಸಂಜೆ 5 ಗಂಟೆಗೆ ಬಾಗಿಲು ತೆರೆಯಿತು. ನಂತರ, ನಡೆದ ದರ್ಬಾರ್ ಉತ್ಸವ ಹಾಗೂ ಮಂಟಪೋತ್ಸವದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಭಾಗಿಯಾದರು.</p>.<p>ಎಚ್.ಡಿ.ರೇವಣ್ಣ, ಸಂಸದ ಪ್ರತಾಪ ಸಿಂಹ, ಕೆ.ಎಸ್.ಈಶ್ವರಪ್ಪ, ಹರತಾಳು ಹಾಲಪ್ಪ, ಸಂದೇಶ್ ನಾಗರಾಜು ಸೇರಿದಂತೆ ಅನೇಕ ರಾಜಕೀಯ ಮುಖಂಡರು ದೇವಸ್ಥಾನಕ್ಕೆ ಭೇಟಿ ನೀಡಿದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಚಾಮುಂಡಿಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್, ‘ಮುಮ್ಮಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಅಂದಿನಿಂದಲೂ ಈ ಉತ್ಸವ ನಡೆಯುತ್ತಿದೆ. ಮೂರ್ತಿಗೆ ಶುಕ್ರವಾರ ದರ್ಬಾರ್ ಅಲಂಕಾರ ಮಾಡಲಾಗಿತ್ತು’ ಎಂದು ತಿಳಿಸಿದರು.</p>.<p>ಬೆಟ್ಟದ ಪಾದದಲ್ಲಿ ಮೆಟ್ಟಿಲು ಹತ್ತಲು ಬಂದವರು, ರಸ್ತೆ ಮೂಲಕ ಬಂದ ಸಾಮಾನ್ಯ ಜನರು ದೇವರ ದರ್ಶನಕ್ಕಾಗಿ ಪರದಾಡಿದರು. ಪ್ರವೇಶ ನೀಡುವಂತೆ ಪೊಲೀಸರನ್ನು ಪರಿಪರಿಯಾಗಿ ಕೇಳಿಕೊಳ್ಳುತ್ತಿದ್ದ ದೃಶ್ಯಗಳು ಕಂಡು ಬಂದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ನಾಡ ದೇವತೆ ಚಾಮುಂಡೇಶ್ವರಿಯ ವರ್ಧಂತ್ಯುತ್ಸವ ಶುಕ್ರವಾರ ಶ್ರದ್ಧಾ ಭಕ್ತಿಯಿಂದ ಚಾಮುಂಡಿಬೆಟ್ಟದಲ್ಲಿ ನೆರವೇರಿತು.</p>.<p>ಆಷಾಢ ಮಾಸದ ಕೃಷ್ಣ ಪಕ್ಷದ ರೇವತಿ ನಕ್ಷತ್ರದಲ್ಲಿ ಪ್ರತಿ ವರ್ಷ ನಡೆಯುವ ಈ ಉತ್ಸವಕ್ಕೆ ಕೋವಿಡ್ ಕಾರಣದಿಂದ ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೂ, ಹೆಚ್ಚಿನ ಸಂಖ್ಯೆಯಲ್ಲಿ ಗಣ್ಯ ವ್ಯಕ್ತಿಗಳು ಇಲ್ಲಿಗೆ ಬಂದು ದರ್ಶನ ಪಡೆದರು.</p>.<p>ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಷಿಕಾ ಕುಮಾರಿ ದಂಪತಿ ಭೇಟಿ ನೀಡಿ ಉತ್ಸವ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಮಂಗಳವಾದ್ಯಗಳ ಸಮೇತ ಉತ್ಸವ ಮೂರ್ತಿಯ ಮೆರವಣಿಗೆಯು ಪಲ್ಲಕ್ಕಿಯಲ್ಲಿ ದೇಗುಲದ ಒಳಾಂಗಣ<br />ದಲ್ಲಿ ನೆರವೇರಿತು. ಹಣ್ಣು, ಕಾಯಿಗ<br />ಳನ್ನು ಭಕ್ತರು ಸಮರ್ಪಿಸಿದರು. ರಾಜವಂಶಸ್ಥರು ದೇವರ ಮೂರ್ತಿಯ ಮುಂದೆ ಈಡುಗಾಯಿ ಒಡೆಯುವ ಮೂಲಕ ಉತ್ಸವ ಸಂಪನ್ನಗೊಂಡಿತು.</p>.<p>ದೇಗುಲದ ಹೊರಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಚಾಮುಂಡಿಬೆಟ್ಟದ ಗ್ರಾಮದವರಿಗೆ ಮುಕ್ತ ಪ್ರವೇಶ ಇದ್ದುದ್ದು, ಹಾಗೂ ಹೊರಗಿನಿಂದ ಬಂದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದುದ್ದರಿಂದ ಜನಜಂಗುಳಿ ಹೆಚ್ಚಾಗಿತ್ತು.</p>.<p>ಸಂಜೆ 7.15 ಗಂಟೆಗೆ ತೆರೆಯುತ್ತಿದ್ದ ದೇಗುಲ ಶುಕ್ರವಾರ ಸಂಜೆ 5 ಗಂಟೆಗೆ ಬಾಗಿಲು ತೆರೆಯಿತು. ನಂತರ, ನಡೆದ ದರ್ಬಾರ್ ಉತ್ಸವ ಹಾಗೂ ಮಂಟಪೋತ್ಸವದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಭಾಗಿಯಾದರು.</p>.<p>ಎಚ್.ಡಿ.ರೇವಣ್ಣ, ಸಂಸದ ಪ್ರತಾಪ ಸಿಂಹ, ಕೆ.ಎಸ್.ಈಶ್ವರಪ್ಪ, ಹರತಾಳು ಹಾಲಪ್ಪ, ಸಂದೇಶ್ ನಾಗರಾಜು ಸೇರಿದಂತೆ ಅನೇಕ ರಾಜಕೀಯ ಮುಖಂಡರು ದೇವಸ್ಥಾನಕ್ಕೆ ಭೇಟಿ ನೀಡಿದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಚಾಮುಂಡಿಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್, ‘ಮುಮ್ಮಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಅಂದಿನಿಂದಲೂ ಈ ಉತ್ಸವ ನಡೆಯುತ್ತಿದೆ. ಮೂರ್ತಿಗೆ ಶುಕ್ರವಾರ ದರ್ಬಾರ್ ಅಲಂಕಾರ ಮಾಡಲಾಗಿತ್ತು’ ಎಂದು ತಿಳಿಸಿದರು.</p>.<p>ಬೆಟ್ಟದ ಪಾದದಲ್ಲಿ ಮೆಟ್ಟಿಲು ಹತ್ತಲು ಬಂದವರು, ರಸ್ತೆ ಮೂಲಕ ಬಂದ ಸಾಮಾನ್ಯ ಜನರು ದೇವರ ದರ್ಶನಕ್ಕಾಗಿ ಪರದಾಡಿದರು. ಪ್ರವೇಶ ನೀಡುವಂತೆ ಪೊಲೀಸರನ್ನು ಪರಿಪರಿಯಾಗಿ ಕೇಳಿಕೊಳ್ಳುತ್ತಿದ್ದ ದೃಶ್ಯಗಳು ಕಂಡು ಬಂದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>