ಮಾವಿನತೋರಣ ಹಾಗೂ ಬಾಳೆಕಂದುಗಳ ಮೂಲಕ ಹಲವು ದೇಗುಲಗಳನ್ನು ಸಿಂಗರಿಸಲಾಗಿತ್ತು. ವಿಶೇಷವಾಗಿ ನಗರದಲ್ಲಿರುವ ಎಲ್ಲ ಮಹದೇಶ್ವರ ದೇಗುಲಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು. ಸಿದ್ದಪ್ಪ ಚೌಕ, ಹೊಸಕೇರಿ, ಲಷ್ಕರ್ ಮೊಹಲ್ಲಾ, ನಾರಾಯಣಶಾಸ್ತ್ರಿ ರಸ್ತೆಗಳಲ್ಲಿರುವ ಮಹದೇಶ್ವರ ದೇಗುಲಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು.