ತಾತಯ್ಯ ಉದ್ಯಾನದಲ್ಲಿ ಶವ ಪತ್ತೆ
ಇಲ್ಲಿನ ನಗರ ಬಸ್ ನಿಲ್ದಾಣದ ಎದುರು ಇರುವ ತಾತಯ್ಯ ಉದ್ಯಾನದಲ್ಲಿ ವ್ಯಕ್ತಿಯೊಬ್ಬರ ಶವ ದೊರೆತಿದೆ. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ಮೂಡಿದೆ. ಕಳೆದೆರಡು ದಿನಗಳ ಹಿಂದೆಯೇ ಮೃತಪಟ್ಟಿದ್ದರಿಂದ ದೇಹವು ಕೊಳೆತಿದೆ. ಇವರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.