<p><strong>ಮೈಸೂರು:</strong> ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಕೆ.ಆರ್.ಆಸ್ಪತ್ರೆಯಲ್ಲಿ ಹೆಚ್ಚಿನ ಹಾಸಿಗೆಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.</p>.<p>ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಅಧಿಕಾರಿಗಳು, ವೈದ್ಯರು, ನರ್ಸ್ಗಳೊಂದಿಗೆ ಚರ್ಚಿಸಿದರು. ಆಕ್ಸಿಜನ್ ಸಿಲಿಂಡರ್, ವೆಂಟಿಲೇಟರ್ ವ್ಯವಸ್ಥೆಯನ್ನು ಪರಿಶೀಲಿಸಿದರು.</p>.<p>ಸದ್ಯ ಕೆ.ಆರ್.ಆಸ್ಪತ್ರೆಯಲ್ಲಿ 178 ಹಾಸಿಗೆಗಳು ಇವೆ. ಇವುಗಳನ್ನು ಹೆಚ್ಚಿಗೆ ಮಾಡಬೇಕು. ಟ್ರಾಮಾ ಕೇರ್ ಕೇಂದ್ರದಲ್ಲಿ ಆಕ್ಸಿಜನ್ ಹಾಸಿಗೆ ವ್ಯವಸ್ಥೆ ಪ್ರಕ್ರಿಯೆಯನ್ನು ಬೇಗನೇ ಪೂರ್ಣಗೊಳಿಸಿ ಎಂದು ಹೇಳಿದರು.</p>.<p>ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಿ ಎಂದು ಸೂಚನೆ ನೀಡಿದರು.</p>.<p>ಮೈಸೂರು ವೈದ್ಯಕೀಯ ಕಾಲೇಜಿನ ನಿರ್ದೇಶಕ ಹಾಗೂ ಡೀನ್ ಡಾ.ಸಿ.ಪಿ.ನಂಜರಾಜ್, ಕೆ.ಆರ್.ಆಸ್ಪತ್ರೆ ಅಧೀಕ್ಷಕ ನಂಜುಂಡಸ್ವಾಮಿ, ಚೆಲುವಾಂಬ ಆಸ್ಪತ್ರೆ ಅಧೀಕ್ಷಕಿ ಡಾ.ಪ್ರಮೀಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಕೆ.ಆರ್.ಆಸ್ಪತ್ರೆಯಲ್ಲಿ ಹೆಚ್ಚಿನ ಹಾಸಿಗೆಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.</p>.<p>ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಅಧಿಕಾರಿಗಳು, ವೈದ್ಯರು, ನರ್ಸ್ಗಳೊಂದಿಗೆ ಚರ್ಚಿಸಿದರು. ಆಕ್ಸಿಜನ್ ಸಿಲಿಂಡರ್, ವೆಂಟಿಲೇಟರ್ ವ್ಯವಸ್ಥೆಯನ್ನು ಪರಿಶೀಲಿಸಿದರು.</p>.<p>ಸದ್ಯ ಕೆ.ಆರ್.ಆಸ್ಪತ್ರೆಯಲ್ಲಿ 178 ಹಾಸಿಗೆಗಳು ಇವೆ. ಇವುಗಳನ್ನು ಹೆಚ್ಚಿಗೆ ಮಾಡಬೇಕು. ಟ್ರಾಮಾ ಕೇರ್ ಕೇಂದ್ರದಲ್ಲಿ ಆಕ್ಸಿಜನ್ ಹಾಸಿಗೆ ವ್ಯವಸ್ಥೆ ಪ್ರಕ್ರಿಯೆಯನ್ನು ಬೇಗನೇ ಪೂರ್ಣಗೊಳಿಸಿ ಎಂದು ಹೇಳಿದರು.</p>.<p>ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಿ ಎಂದು ಸೂಚನೆ ನೀಡಿದರು.</p>.<p>ಮೈಸೂರು ವೈದ್ಯಕೀಯ ಕಾಲೇಜಿನ ನಿರ್ದೇಶಕ ಹಾಗೂ ಡೀನ್ ಡಾ.ಸಿ.ಪಿ.ನಂಜರಾಜ್, ಕೆ.ಆರ್.ಆಸ್ಪತ್ರೆ ಅಧೀಕ್ಷಕ ನಂಜುಂಡಸ್ವಾಮಿ, ಚೆಲುವಾಂಬ ಆಸ್ಪತ್ರೆ ಅಧೀಕ್ಷಕಿ ಡಾ.ಪ್ರಮೀಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>