<p>ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ನೂತನ ಕ್ರಮಗಳ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಭಾನುವಾರ ಸಭೆ ನಡೆಯಿತು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದರು.</p>.<p>ಮೈಸೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.</p>.<p>ಜಿಲ್ಲೆಯಲ್ಲಿ ಪ್ರತಿದಿನ 6,500 ಕೋವಿಡ್ ಪರೀಕ್ಷೆಗಳನ್ನು ನಡೆಸುವ ಗುರಿ ಇಟ್ಟುಕೊಳ್ಳಲಾಗಿದೆ. 3,900 ಆರ್ಟಿ–ಪಿಸಿಆರ್ ಹಾಗೂ 2,900 ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗಳನ್ನು ನಡೆಸಬೇಕು. ಇದಕ್ಕಾಗಿ ಅಗತ್ಯವಿರುವ ಸಿಬ್ಬಂದಿ ನೇಮಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾಗಿ ಸಭೆಯಲ್ಲಿ ಪಾಲ್ಗೊಂಡ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p>ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿ ಸುತ್ತಿರುವ ವೈದ್ಯಕೀಯ ಸಿಬ್ಬಂದಿ ಪ್ರತಿ ಭಟನೆ ನಡೆಸುತ್ತಿರುವುದರಿಂದ ಕೆಲವು ಕಡೆಗಳಲ್ಲಿ ಕೋವಿಡ್ ನಿರ್ವಹಣೆ ಯಲ್ಲಿ ಏರುಪೇರಾಗಿದೆ. ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.</p>.<p>ಮನೆಗಳಲ್ಲೇ ಐಸೊಲೇಷನ್ ಆಗಿರುವವರ ಮಾಹಿತಿ ಆ್ಯಪ್ಗಳಲ್ಲಿ ಅಪ್ಡೇಟ್ ಆಗುತ್ತಿಲ್ಲ. ಈ ಸಮಸ್ಯೆ ಸರಿಪಡಿಸುವಂತೆ ತಿಳಿಸಿದರು.</p>.<p>ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ 50 ಬೆಡ್ಗಳನ್ನು ಕೊರೊನಾ ಸೋಂಕಿತರಿಗೆ ಮೀಲಿಡುವ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿನ ಶೇ 50 ರಷ್ಟು ಬೆಡ್ಗಳನ್ನು ಕೋವಿಡ್ಗಾಗಿ ನಿಗದಿಪಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.</p>.<p>ಮೈಸೂರು ನಗರದಲ್ಲಿ ಕೋವಿಡ್ ಪರೀಕ್ಷೆಗೆ ಈಗ ಇರುವ 25 ಮೊಬೈಲ್ ತಂಡಗಳನ್ನು 60ಕ್ಕೆ ಹೆಚ್ಚಿಸುವುದು ಮತ್ತು ಗ್ರಾಮೀಣ ಪ್ರದೇಶಗಳಲ್ಲೂ ಮೊಬೈಲ್ ಪರೀಕ್ಷಾ ತಂಡಗಳನ್ನು ಹೆಚ್ಚಿಸಿ, ಅಗತ್ಯ ಸಿಬ್ಬಂದಿ ನೇಮಿಸಲು ನಿರ್ಧರಿಸಲಾಯಿತು.</p>.<p>ಜಿ.ಪಂ ಸಿಇಒ ಡಿ.ಭಾರತಿ, ಪಾಲಿಕೆ ಆಯುಕ್ತ ಗುರುದತ್ತ್ ಹೆಗಡೆ, ಡಿಎಚ್ಒ ವೆಂಕಟೇಶ್, ಅಧಿಕಾರಿಗಳು ಪಾಲ್ಗೊಂಡರು.</p>.<p><strong>1,037 ಪ್ರಕರಣ ದೃಢ</strong></p>.<p>ಮೈಸೂರು: ಜಿಲ್ಲೆಯಲ್ಲಿ ಹೊಸದಾಗಿ 1,037 ಮಂದಿಗೆ ಕೋವಿಡ್ ದೃಢ ಪಟ್ಟಿದೆ. ಇದರಿಂದ ಸೋಂಕಿತರ ಒಟ್ಟು ಸಂಖ್ಯೆ 37,328ಕ್ಕೆ ಏರಿಕೆಯಾಗಿದೆ. 316 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,737 ಆಗಿದೆ. ಮತ್ತೆ 12 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 810ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ನೂತನ ಕ್ರಮಗಳ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಭಾನುವಾರ ಸಭೆ ನಡೆಯಿತು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದರು.</p>.<p>ಮೈಸೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.</p>.<p>ಜಿಲ್ಲೆಯಲ್ಲಿ ಪ್ರತಿದಿನ 6,500 ಕೋವಿಡ್ ಪರೀಕ್ಷೆಗಳನ್ನು ನಡೆಸುವ ಗುರಿ ಇಟ್ಟುಕೊಳ್ಳಲಾಗಿದೆ. 3,900 ಆರ್ಟಿ–ಪಿಸಿಆರ್ ಹಾಗೂ 2,900 ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗಳನ್ನು ನಡೆಸಬೇಕು. ಇದಕ್ಕಾಗಿ ಅಗತ್ಯವಿರುವ ಸಿಬ್ಬಂದಿ ನೇಮಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾಗಿ ಸಭೆಯಲ್ಲಿ ಪಾಲ್ಗೊಂಡ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<p>ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿ ಸುತ್ತಿರುವ ವೈದ್ಯಕೀಯ ಸಿಬ್ಬಂದಿ ಪ್ರತಿ ಭಟನೆ ನಡೆಸುತ್ತಿರುವುದರಿಂದ ಕೆಲವು ಕಡೆಗಳಲ್ಲಿ ಕೋವಿಡ್ ನಿರ್ವಹಣೆ ಯಲ್ಲಿ ಏರುಪೇರಾಗಿದೆ. ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.</p>.<p>ಮನೆಗಳಲ್ಲೇ ಐಸೊಲೇಷನ್ ಆಗಿರುವವರ ಮಾಹಿತಿ ಆ್ಯಪ್ಗಳಲ್ಲಿ ಅಪ್ಡೇಟ್ ಆಗುತ್ತಿಲ್ಲ. ಈ ಸಮಸ್ಯೆ ಸರಿಪಡಿಸುವಂತೆ ತಿಳಿಸಿದರು.</p>.<p>ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ 50 ಬೆಡ್ಗಳನ್ನು ಕೊರೊನಾ ಸೋಂಕಿತರಿಗೆ ಮೀಲಿಡುವ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿನ ಶೇ 50 ರಷ್ಟು ಬೆಡ್ಗಳನ್ನು ಕೋವಿಡ್ಗಾಗಿ ನಿಗದಿಪಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.</p>.<p>ಮೈಸೂರು ನಗರದಲ್ಲಿ ಕೋವಿಡ್ ಪರೀಕ್ಷೆಗೆ ಈಗ ಇರುವ 25 ಮೊಬೈಲ್ ತಂಡಗಳನ್ನು 60ಕ್ಕೆ ಹೆಚ್ಚಿಸುವುದು ಮತ್ತು ಗ್ರಾಮೀಣ ಪ್ರದೇಶಗಳಲ್ಲೂ ಮೊಬೈಲ್ ಪರೀಕ್ಷಾ ತಂಡಗಳನ್ನು ಹೆಚ್ಚಿಸಿ, ಅಗತ್ಯ ಸಿಬ್ಬಂದಿ ನೇಮಿಸಲು ನಿರ್ಧರಿಸಲಾಯಿತು.</p>.<p>ಜಿ.ಪಂ ಸಿಇಒ ಡಿ.ಭಾರತಿ, ಪಾಲಿಕೆ ಆಯುಕ್ತ ಗುರುದತ್ತ್ ಹೆಗಡೆ, ಡಿಎಚ್ಒ ವೆಂಕಟೇಶ್, ಅಧಿಕಾರಿಗಳು ಪಾಲ್ಗೊಂಡರು.</p>.<p><strong>1,037 ಪ್ರಕರಣ ದೃಢ</strong></p>.<p>ಮೈಸೂರು: ಜಿಲ್ಲೆಯಲ್ಲಿ ಹೊಸದಾಗಿ 1,037 ಮಂದಿಗೆ ಕೋವಿಡ್ ದೃಢ ಪಟ್ಟಿದೆ. ಇದರಿಂದ ಸೋಂಕಿತರ ಒಟ್ಟು ಸಂಖ್ಯೆ 37,328ಕ್ಕೆ ಏರಿಕೆಯಾಗಿದೆ. 316 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,737 ಆಗಿದೆ. ಮತ್ತೆ 12 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 810ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>