<p><strong>ಮೈಸೂರು:</strong> ‘ಕೆ.ಆರ್.ವಿಧಾನಸಭಾ ಕ್ಷೇತ್ರದಲ್ಲಿ ಅಪರಾಧ ಚಟುವಟಿಕೆಗಳನ್ನು ಮುಕ್ತಗೊಳಿಸುವುದಾಗಿ ಶಾಸಕ ಎಸ್.ಎ.ರಾಮದಾಸ್ ಹೇಳಿರುವುದು ನಗೆಪಾಟಲಿಗೀಡಾಗಿದೆ’ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಂಗಳವಾರ ಇಲ್ಲಿ ವಾಗ್ದಾಳಿ ನಡೆಸಿದರು.</p>.<p>‘ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 9 ಕೊಲೆ, 18 ಸರಗಳ್ಳತನ ಪ್ರಕರಣ ದಾಖಲಾಗಿವೆ. ದರೋಡೆ, ಅತ್ಯಾಚಾರ, ದೌರ್ಜನ್ಯ ಹೆಚ್ಚಿವೆ’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲೆ ತೋಟಗಳು ಗಾಂಜಾ ಅಡ್ಡೆಗಳಾಗಿವೆ. ಎಲ್ಲವೂ ಗೊತ್ತಿದ್ದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಪೊಲೀಸ್ ವೈಫಲ್ಯದಿಂದಲೇ ಅಪರಾಧ ಚಟುವಟಿಕೆ ಹೆಚ್ಚಿವೆ’ ಎಂದು ಸೋಮಶೇಖರ್ ಕಿಡಿಕಾರಿದರು.</p>.<p>ರಾಮದಾಸ್ ಉತ್ಸವ: ‘ಕ್ಷೇತ್ರದಲ್ಲಿ ನಡೆದಿದ್ದು ಮೋದಿ ಉತ್ಸವವಲ್ಲ. ರಾಮದಾಸ್ ಉತ್ಸವವಷ್ಟೇ. ಸುಳ್ಳು ಹೇಳೋದೇ ಬಿಜೆಪಿಗರ ಕಾಯಕವಾಗಿದೆ. ಯಾವೊಂದು ಕೆಲಸ ಮಾಡದಿದ್ದರೂ ಪ್ರಚಾರ ಪಡೆಯುವುದು ಹೇಗೆಂಬುದು ಕರಗತವಾಗಿದೆ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿ ಹೊರತುಪಡಿಸಿದರೆ; ಉಳಿದ ಯಾವ ಅವಧಿಯಲ್ಲಿ ಯಾರೊಬ್ಬರಿಗಾದರೂ ಮನೆ ಕೊಟ್ಟಿರುವುದನ್ನು ಶಾಸಕರು ಸಾಬೀತುಪಡಿಸಿದರೆ, ನಾನು ರಾಜಕೀಯದಿಂದಲೇ ನಿವೃತ್ತನಾಗುವೆ’ ಎಂದು ಮಾಜಿ ಶಾಸಕರು ರಾಮದಾಸ್ಗೆ ಸವಾಲು ಹಾಕಿದರು.</p>.<p>‘ಯಡಿಯೂರಪ್ಪ ಜೈಲಿಗೆ ಹೋದಾಗ ಪಟಾಕಿ ಹೊಡೆದು ಸಂಭ್ರಮಿಸಿದವರು, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಪಿತೂರಿ ನಡೆಸಿದವರೇ; ವೀರಶೈವ ಲಿಂಗಾಯತರ ವೋಟಿನಾಸೆಗಾಗಿ ಬಿಎಸ್ವೈ ಕರೆಸಿ ಕಾರ್ಯಕ್ರಮ ನಡೆಸಿದರು’ ಎಂದು ಸೋಮಶೇಖರ್ ಶಾಸಕರ ಕಾಲೆಳೆದರು.</p>.<p>ಪಾಲಿಕೆ ಸದಸ್ಯ ಗೋಪಿ, ಮಾಜಿ ಸದಸ್ಯ ಸುನೀಲ್ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕೆ.ಆರ್.ವಿಧಾನಸಭಾ ಕ್ಷೇತ್ರದಲ್ಲಿ ಅಪರಾಧ ಚಟುವಟಿಕೆಗಳನ್ನು ಮುಕ್ತಗೊಳಿಸುವುದಾಗಿ ಶಾಸಕ ಎಸ್.ಎ.ರಾಮದಾಸ್ ಹೇಳಿರುವುದು ನಗೆಪಾಟಲಿಗೀಡಾಗಿದೆ’ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಂಗಳವಾರ ಇಲ್ಲಿ ವಾಗ್ದಾಳಿ ನಡೆಸಿದರು.</p>.<p>‘ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 9 ಕೊಲೆ, 18 ಸರಗಳ್ಳತನ ಪ್ರಕರಣ ದಾಖಲಾಗಿವೆ. ದರೋಡೆ, ಅತ್ಯಾಚಾರ, ದೌರ್ಜನ್ಯ ಹೆಚ್ಚಿವೆ’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲೆ ತೋಟಗಳು ಗಾಂಜಾ ಅಡ್ಡೆಗಳಾಗಿವೆ. ಎಲ್ಲವೂ ಗೊತ್ತಿದ್ದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಪೊಲೀಸ್ ವೈಫಲ್ಯದಿಂದಲೇ ಅಪರಾಧ ಚಟುವಟಿಕೆ ಹೆಚ್ಚಿವೆ’ ಎಂದು ಸೋಮಶೇಖರ್ ಕಿಡಿಕಾರಿದರು.</p>.<p>ರಾಮದಾಸ್ ಉತ್ಸವ: ‘ಕ್ಷೇತ್ರದಲ್ಲಿ ನಡೆದಿದ್ದು ಮೋದಿ ಉತ್ಸವವಲ್ಲ. ರಾಮದಾಸ್ ಉತ್ಸವವಷ್ಟೇ. ಸುಳ್ಳು ಹೇಳೋದೇ ಬಿಜೆಪಿಗರ ಕಾಯಕವಾಗಿದೆ. ಯಾವೊಂದು ಕೆಲಸ ಮಾಡದಿದ್ದರೂ ಪ್ರಚಾರ ಪಡೆಯುವುದು ಹೇಗೆಂಬುದು ಕರಗತವಾಗಿದೆ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿ ಹೊರತುಪಡಿಸಿದರೆ; ಉಳಿದ ಯಾವ ಅವಧಿಯಲ್ಲಿ ಯಾರೊಬ್ಬರಿಗಾದರೂ ಮನೆ ಕೊಟ್ಟಿರುವುದನ್ನು ಶಾಸಕರು ಸಾಬೀತುಪಡಿಸಿದರೆ, ನಾನು ರಾಜಕೀಯದಿಂದಲೇ ನಿವೃತ್ತನಾಗುವೆ’ ಎಂದು ಮಾಜಿ ಶಾಸಕರು ರಾಮದಾಸ್ಗೆ ಸವಾಲು ಹಾಕಿದರು.</p>.<p>‘ಯಡಿಯೂರಪ್ಪ ಜೈಲಿಗೆ ಹೋದಾಗ ಪಟಾಕಿ ಹೊಡೆದು ಸಂಭ್ರಮಿಸಿದವರು, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಪಿತೂರಿ ನಡೆಸಿದವರೇ; ವೀರಶೈವ ಲಿಂಗಾಯತರ ವೋಟಿನಾಸೆಗಾಗಿ ಬಿಎಸ್ವೈ ಕರೆಸಿ ಕಾರ್ಯಕ್ರಮ ನಡೆಸಿದರು’ ಎಂದು ಸೋಮಶೇಖರ್ ಶಾಸಕರ ಕಾಲೆಳೆದರು.</p>.<p>ಪಾಲಿಕೆ ಸದಸ್ಯ ಗೋಪಿ, ಮಾಜಿ ಸದಸ್ಯ ಸುನೀಲ್ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>