ಬಳಿಕ ಮಾತನಾಡಿದ ಅವರು, ‘ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ಜೋರಾಗಿ ಕೂಗಿದ್ದಾರೆ. ಈ ವೇಳೆ ಗುಡಿಸಿಲಿನಲ್ಲಿ ಮಲಗಿದ್ದವರು ನೆರವಿಗೆ ಬಂದಿದ್ದಾರೆ. ಹೀಗಾಗಿ, ಆತ ಓಡಿ ಹೋಗಿದ್ದಾನೆ. ಆಸ್ಪತ್ರೆಯಲ್ಲಿ ಭದ್ರತಾ ವ್ಯವಸ್ಥೆ ಸ್ವಲ್ಪ ಕಡಿಮೆ ಇದೆ. ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸಲು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ಗೆ ಸೂಚಿಸಲಾಗಿದೆ. ಈ ಸಂಬಂಧ ಸೋಮವಾರ ಸಭೆ ನಡೆಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೂ ತರಲಾಗುವುದು. ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೂ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.