<p><strong>ಮೈಸೂರು:</strong> ನಗರದಲ್ಲೆಡೆ ಶನಿವಾರ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಇಲ್ಲಿನ ಸುತ್ತೂರು ಮಠದಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮೈಸೂರು ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಡಾ.ಎಂ.ಜಿ.ಕೃಷ್ಣಮೂರ್ತಿ ಧ್ವಜಾರೋಹಣ ನೆರವೇರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಪದವುಯವರೆಗೂ ದೇಶಭಕ್ತಿ ಉಂಟು ಮಾಡುವಂತಹ ಪಠ್ಯಗಳನ್ನು ಅಳವಡಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಇಂದಿನ ಮಕ್ಕಳು, ಯುವಕರು ಹಾಗೂ ರಾಜಕಾರಣಿಗಳು ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕಿದೆ. ಅದರ ಪರಿವೇ ಇಲ್ಲದವರಿಗೆ ದೇಶವನ್ನು ಸದೃಢವಾಗಿ ಮುನ್ನಡೆಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.</p>.<p>ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜೆಎಸ್ಎಸ್ ಆಸ್ಪತ್ರೆಯ ನರರೋಗ ತಜ್ಞ ಕರ್ನಲ್ ಡಾ.ಟಿ.ಎಸ್.ವಾಸನ್, ಆಯುರ್ವೇದ ತಜ್ಞ ವೈದ್ಯ ಡಾ.ಬಿ.ಗುರುಬಸವರಾಜು ಇದ್ದರು.</p>.<p class="Briefhead">ಮುಕ್ತ ವಿವಿಯಲ್ಲಿ ಕೊರೊನಾ ವಾರಿಯರ್ಸ್ಗೆ ಗೌರವ</p>.<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಕೊರೊನಾ ವಾರಿಯರ್ಸ್ ಆದ ಚಲುವಾಂಬ ಆಸ್ಪತ್ರೆಯ ಶುಶ್ರೂಷಕ ಅಧೀಕ್ಷಕಿ ಸೌಭಾಗ್ಯ ಹಾಗೂ ಕೆ.ಆರ್.ಆಸ್ಪತ್ರೆಯ ಗ್ರೂಪ್ ‘ಡಿ’ ನೌಕರರಾದ ಮಂಜುನಾಥ್ ಅವರನ್ನು ಗೌರವಿಸಲಾಯಿತು.</p>.<p>ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ‘ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ನಿತ್ಯವೂ ನಾವು ಸ್ಮರಿಸಬೇಕು. ಅವರ ತತ್ವ ಮತ್ತು ಆದರ್ಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ, ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷ, ಡೀನ್ (ಶೈಕ್ಷಣಿಕ) ಡಾ.ತೇಜಸ್ವಿ ನವಿಲೂರು, ಡಾ.ಕಾಂಬ್ಳೆ ಅಶೋಕ್, ಕುಲಪತಿ ವಿಶೇಷಾಧಿಕಾರಿ ಪ್ರೊ.ದೇವರಾಜು ಇದ್ದರು.</p>.<p class="Briefhead">ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು– ಸುಧಾಕರ ಶೆಟ್ಟಿ</p>.<p>ಇಲ್ಲಿನ ಜ್ಞಾನಸರೋವರ ಅಂತರರಾಷ್ಟ್ರೀಯ ವಸತಿ ಶಾಲೆಯಲ್ಲಿ ಶಾಲೆಯ ಸಂಸ್ಥಾಪಕ ಸುಧಾಕರ್ ಶೆಟ್ಟಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಭಾರತೀಯತೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಕೊರೊನಾ ವೈರಸ್ ಅನ್ನು ನಿಯಂತ್ರಿಸಬಹುದು’ ಎಂದು ಅಭಿಪ್ರಾಯಪಟ್ಟರು.</p>.<p>ಸರ್ಕಾರವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ, ಆನ್ಲೈನ್ ಶಿಕ್ಷಣ ಉಪಯೋಗಿಸಲು ಬಾರದ ಪೋಷಕರಿಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿ, ಅವರು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<p>ಶಾಲೆಯ ಕಾರ್ಯದರ್ಶಿ ಸುಖಲತಾ ಶೆಟ್ಟಿ, ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಶೆಟ್ಟಿ ಇದ್ದರು.</p>.<p class="Briefhead">ವಿಶ್ವಪ್ರಜ್ಞ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ</p>.<p>ಮೈಸೂರಿನ ದಟ್ಟಗಳ್ಳಿಯಲ್ಲಿರುವ ವಿಶ್ವಪ್ರಜ್ಞ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ.ಕೆ.ಸುರೇಶ್ಬಾಬು ಧ್ವಜಾರೋಹಣ ಮಾಡಿದರು. ಉಪಾಧ್ಯಕ್ಷ ವೈ.ಎನ್.ಶಂಕರೇಗೌಡ, ಕಾರ್ಯದರ್ಶಿ ಎಂ.ಎನ್.ಮಹೇಂದ್ರ, ಆಡಳಿತ ಮಂಡಳಿಯ ಸದಸ್ಯ ಸತ್ಯಾನಂದ, ಎ.ಆರ್.ದೇವರಾಜು, ಕಾರ್ಯಾಧ್ಯಕ್ಷ ಎಂ.ಎನ್.ಕೃಷ್ಣಸ್ವಾಮಿ, ಮುಖ್ಯ ಶಿಕ್ಷಕಿ ಜಿ.ಎನ್.ಸುಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದಲ್ಲೆಡೆ ಶನಿವಾರ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಇಲ್ಲಿನ ಸುತ್ತೂರು ಮಠದಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮೈಸೂರು ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಡಾ.ಎಂ.ಜಿ.ಕೃಷ್ಣಮೂರ್ತಿ ಧ್ವಜಾರೋಹಣ ನೆರವೇರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಪದವುಯವರೆಗೂ ದೇಶಭಕ್ತಿ ಉಂಟು ಮಾಡುವಂತಹ ಪಠ್ಯಗಳನ್ನು ಅಳವಡಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಇಂದಿನ ಮಕ್ಕಳು, ಯುವಕರು ಹಾಗೂ ರಾಜಕಾರಣಿಗಳು ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕಿದೆ. ಅದರ ಪರಿವೇ ಇಲ್ಲದವರಿಗೆ ದೇಶವನ್ನು ಸದೃಢವಾಗಿ ಮುನ್ನಡೆಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.</p>.<p>ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜೆಎಸ್ಎಸ್ ಆಸ್ಪತ್ರೆಯ ನರರೋಗ ತಜ್ಞ ಕರ್ನಲ್ ಡಾ.ಟಿ.ಎಸ್.ವಾಸನ್, ಆಯುರ್ವೇದ ತಜ್ಞ ವೈದ್ಯ ಡಾ.ಬಿ.ಗುರುಬಸವರಾಜು ಇದ್ದರು.</p>.<p class="Briefhead">ಮುಕ್ತ ವಿವಿಯಲ್ಲಿ ಕೊರೊನಾ ವಾರಿಯರ್ಸ್ಗೆ ಗೌರವ</p>.<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಕೊರೊನಾ ವಾರಿಯರ್ಸ್ ಆದ ಚಲುವಾಂಬ ಆಸ್ಪತ್ರೆಯ ಶುಶ್ರೂಷಕ ಅಧೀಕ್ಷಕಿ ಸೌಭಾಗ್ಯ ಹಾಗೂ ಕೆ.ಆರ್.ಆಸ್ಪತ್ರೆಯ ಗ್ರೂಪ್ ‘ಡಿ’ ನೌಕರರಾದ ಮಂಜುನಾಥ್ ಅವರನ್ನು ಗೌರವಿಸಲಾಯಿತು.</p>.<p>ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ‘ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ನಿತ್ಯವೂ ನಾವು ಸ್ಮರಿಸಬೇಕು. ಅವರ ತತ್ವ ಮತ್ತು ಆದರ್ಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ, ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷ, ಡೀನ್ (ಶೈಕ್ಷಣಿಕ) ಡಾ.ತೇಜಸ್ವಿ ನವಿಲೂರು, ಡಾ.ಕಾಂಬ್ಳೆ ಅಶೋಕ್, ಕುಲಪತಿ ವಿಶೇಷಾಧಿಕಾರಿ ಪ್ರೊ.ದೇವರಾಜು ಇದ್ದರು.</p>.<p class="Briefhead">ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು– ಸುಧಾಕರ ಶೆಟ್ಟಿ</p>.<p>ಇಲ್ಲಿನ ಜ್ಞಾನಸರೋವರ ಅಂತರರಾಷ್ಟ್ರೀಯ ವಸತಿ ಶಾಲೆಯಲ್ಲಿ ಶಾಲೆಯ ಸಂಸ್ಥಾಪಕ ಸುಧಾಕರ್ ಶೆಟ್ಟಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಭಾರತೀಯತೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಕೊರೊನಾ ವೈರಸ್ ಅನ್ನು ನಿಯಂತ್ರಿಸಬಹುದು’ ಎಂದು ಅಭಿಪ್ರಾಯಪಟ್ಟರು.</p>.<p>ಸರ್ಕಾರವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ, ಆನ್ಲೈನ್ ಶಿಕ್ಷಣ ಉಪಯೋಗಿಸಲು ಬಾರದ ಪೋಷಕರಿಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿ, ಅವರು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<p>ಶಾಲೆಯ ಕಾರ್ಯದರ್ಶಿ ಸುಖಲತಾ ಶೆಟ್ಟಿ, ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಶೆಟ್ಟಿ ಇದ್ದರು.</p>.<p class="Briefhead">ವಿಶ್ವಪ್ರಜ್ಞ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ</p>.<p>ಮೈಸೂರಿನ ದಟ್ಟಗಳ್ಳಿಯಲ್ಲಿರುವ ವಿಶ್ವಪ್ರಜ್ಞ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ.ಕೆ.ಸುರೇಶ್ಬಾಬು ಧ್ವಜಾರೋಹಣ ಮಾಡಿದರು. ಉಪಾಧ್ಯಕ್ಷ ವೈ.ಎನ್.ಶಂಕರೇಗೌಡ, ಕಾರ್ಯದರ್ಶಿ ಎಂ.ಎನ್.ಮಹೇಂದ್ರ, ಆಡಳಿತ ಮಂಡಳಿಯ ಸದಸ್ಯ ಸತ್ಯಾನಂದ, ಎ.ಆರ್.ದೇವರಾಜು, ಕಾರ್ಯಾಧ್ಯಕ್ಷ ಎಂ.ಎನ್.ಕೃಷ್ಣಸ್ವಾಮಿ, ಮುಖ್ಯ ಶಿಕ್ಷಕಿ ಜಿ.ಎನ್.ಸುಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>