ಕಳೆದ 82 ದಿನಗಳಿಂದ ಕಾರ್ಮಿಕರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಯಾರೊಬ್ಬರೂ ಸ್ಪಂದಿಸುತ್ತಿಲ್ಲ. ಕಾರ್ಮಿಕ ಇಲಾಖೆ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಉಸ್ತುವಾರಿ ಸಚಿವರು, ಕಾರ್ಮಿಕರ ಸಚಿವರು, ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ಬೀದಿಪಾಲಾಗಿರುವ ಕಾರ್ಮಿಕರಿಗೆ ಸದ್ಯ ಉಪವಾಸ ಸತ್ಯಾಗ್ರಹ ಒಂದೇ ಉಳಿದಿರುವ ದಾರಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.