‘ತಾಲ್ಲೂಕಿನ ದಾಸನಪುರ ಸೇರಿದಂತೆ ಬಹುತೇಕ ಹಳ್ಳಿಗಳ ರೈತರು ಕಿರು ಕಾಲುವೆ ನೀರನ್ನೇ ನಂಬಿ ಕೃಷಿ ಮಾಡುತ್ತಿದ್ದಾರೆ. ಕಾಲುವೆಯಲ್ಲಿ ಕಳೆ ಗಿಡಗಳು ಬೆಳೆದು, ಹೂಳು ತುಂಬಿ ಸರಿಯಾಗಿ ನೀರು ಹರಿಯದೇ ರೈತರ ಸ್ಥಿತಿ ಚಿಂತಾಜನಕವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು’ ಎಂದು ರೈತ ಮುಖಂಡ ಬಾಲಚಂದ್ರ ಒತ್ತಾಯಿಸಿದ್ದಾರೆ.