ಸಮಿತಿಯ ಪ್ರಧಾನ ಕಾರ್ಯದರ್ಶಿ ಬ್ಯಾಂಕ್ ಎಂ.ಪುಟ್ಟಸ್ವಾಮಿ ಮಾತನಾಡಿ, ‘ಡಿ. 3ರಂದು ಬೆಳಿಗ್ಗೆ 11.30ಕ್ಕೆ ಕಲಾಮಂದಿರದ ಮನೆಯಂಗಳದಲ್ಲಿ ಜಿಲ್ಲಾಡಳಿತದ ಸಹಯೋಗದಲ್ಲಿ ಸಮಿತಿ ವತಿಯಿಂದ ಕನಕದಾಸ ಜಯಂತಿ ಆಚರಿಸಲಾಗುವುದು. ಸಂಜೆ 5.30ಕ್ಕೆ ಸಿದ್ದಾರ್ಥನಗರದಲ್ಲಿರುವ ಕಾಗಿನೆಲೆ ಶಾಖಾ ಮಠದ ಕನಕ ಗುರುಪೀಠದಲ್ಲಿ ಶಿವಾನಂದಪುರಿ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಗುವುದು’ ಎಂದು ತಿಳಿಸಿದರು.