<p><strong>ಮೈಸೂರು:</strong> ಮೈಸೂರು ಭಾಗದ ಕೈಗಾರಿಕಾ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಶೀಘ್ರವೇ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಭರವಸೆ ನೀಡಿದರು.</p>.<p>ಭಾನುವಾರ ನಡೆದ ಕೈಗಾರಿಕೋದ್ಯಮಿಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಅಹವಾಲುಗಳನ್ನು ಆಲಿಸಿ, ಬಳಿಕ ಮಾತನಾಡಿದರು.</p>.<p>ಹುಬ್ಬಳ್ಳಿ ಮಾದರಿಯಲ್ಲಿ ಮೈಸೂರು ಭಾಗದಲ್ಲೂ ಬಂಡವಾಳ ಹೂಡಿಕೆದಾರ ಸಮಾವೇಶ ನಡೆಸಲಾಗುವುದು. ಪ್ರಾದೇಶಿಕವಾಗಿ ಕೈಗಾರಿಕಾದ್ಯಮವನ್ನು ಅಭಿವೃದ್ಧಿಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.</p>.<p>ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ₹ 72 ಸಾವಿರ ಕೋಟಿ ಮೊತ್ತದ ಒಡಂಬಡಿಕೆಗೆ ಸರ್ಕಾರವು ಸಹಿ ಹಾಕಿದೆ. ರಾಜ್ಯದ ಟೈರ್ 2, ಟೈರ್ 3 ನಗರಗಳಲ್ಲಿ ₹ 1 ಲಕ್ಷ ಕೋಟಿ ಬಂಡವಾಳ ಹೂಡಲು ಹೂಡಿಕೆದಾರರು ಸಿದ್ಧವಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು, ಚಾಮರಾಜನಗರದಂತಹ ನಗರಗಳಿಗೆ ಭವಿಷ್ಯದಲ್ಲಿ ಉತ್ತಮ ಬಂಡವಾಳ ಸಿಗಲಿದೆ ಎಂದು ಅವರು ಮಾಹಿತಿ ನೀಡಿದರು.</p>.<p>ಕೈಗಾರಿಕಾ ಕ್ಷೇತ್ರಗಳಿಗೆ ಮೂಲ ಸೌಕರ್ಯ ನೀಡುವುದೂ ಆದ್ಯತೆಯಾಗಿದೆ. ಆದರೆ, ಅತಿ ಸಣ್ಣ – ಪುಟ್ಟ ಸಮಸ್ಯೆಗಳನ್ನು ನಮ್ಮ ಬಳಿ ತರುವ ಬದಲು, ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಕಾರ್ಯಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p><strong>ಶೀಘ್ರವೇ ಕೈಗಾರಿಕಾ ಅದಾಲತ್</strong></p>.<p>‘ಶೀಘ್ರವೇ ಮೈಸೂರಿನಲ್ಲಿ ಕೈಗಾರಿಕಾ ಅದಾಲತ್ ನಡೆಸಲಾಗುವುದು. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಯ ಸಾವಿರಾರು ಪ್ರಕರಣಗಳು ಬಾಕಿ ಉಳಿದಿವೆ. ಅವನ್ನು ಬಗೆಹರಿಸಬೇಕಿದೆ. ಬೆಂಗಳೂರಿನಲ್ಲಿ ಮೊದಲು ಅದಾಲತ್ ನಡೆಸುತ್ತೇವೆ’ ಎಂದರು.<br /><br />ಅಂತೆಯೇ, ರಾಜ್ಯದಲ್ಲಿ ಒಟ್ಟು ನಾಲ್ಕು ಕೈಗಾರಿಕಾ ಉಪನಗರ ಸ್ಥಾಪನೆಗೆ ಚಿಂತನೆ ನಡೆದಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.</p>.<p>ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಮೈಸೂರು ಕೈಗಾರಿಕೆಗಳ ಸಂಘ, ಭಾರತೀಯ ಕೈಗಾರಿಕಾ ಒಕ್ಕೂಟದ ಜಿಲ್ಲಾ ಶಾಖೆಯ ಪದಾಧಿಕಾರಿಗಳು, ಕೈಗಾರಿಕೋದ್ಯಮಿಗಳು ಭಾಗವಹಿಸಿದ್ದರು.</p>.<p>ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಕಾಂಗ್ರೆಸ್ ಮುಖಂಡ ವಾಸು, ಕೈಗಾರಿಕೋದ್ಯಮಿಗಳಾದ ಸುರೇಶ್ ಕುಮಾರ್ ಜೈನ್, ಸುಧಾಕರ ಎಸ್.ಶೆಟ್ಟಿ ಭಾಗವಹಿಸಿ ಮಾತನಾಡಿದರು.</p>.<p class="Briefhead"><strong>ಉಂಡವಾಡಿ ಯೋಜನೆಗೆ ₹ 25 ಕೋಟಿ</strong></p>.<p>ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಉಂಡವಾಡಿ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ಯೋಜನೆಗಾಗಿ ₹ 25 ಕೋಟಿ ಬಿಡುಗಡೆ ಮಾಡಲಾಗುವುದು ಎಂದರು.</p>.<p>ಕೈಗಾರಿಕಾ ಪ್ರದೇಶಗಳಿಗೆ ನೀರಿನ ಕೊರತೆ ಇದೆ. ಇದನ್ನು ಕೂಡಲೇ ಬಗೆಹರಿಸಬೇಕು ಎಂದು ದೇವೇಗೌಡ ಮನವಿ ಮಾಡಿದರು.</p>.<p class="Briefhead"><strong>ದಂಡ ಹಾಕದಂತೆ ಮನವಿ</strong></p>.<p>ವಿವಿಧ ಯೋಜನೆಗಳನ್ನು ಪೂರ್ಣಗೊಳಿಸದೇ ಇರುವ ಕಾರಣಕ್ಕೆ ‘ಕೆಐಎಡಿಬಿ’ ಉದ್ಯಮಿಗಳ ಮೇಲೆ ದೊಡ್ಡ ಪ್ರಮಾಣದ ದಂಡ ವಿಧಿಸಿದೆ. ಇದನ್ನು ಹಿಂಪಡೆಯಬೇಕು ಎಂದು ಕೈಗಾರಿಕೋದ್ಯಮಿಗಳು ಒತ್ತಾಯಿಸಿದರು.</p>.<p>ಯಾವುದೇ ಯೋಜನೆ ತಡವಾಗುವುದಕ್ಕೆ ಕೈಗಾರಿಕೋದ್ಯಮಿಗಳು ಕಾರಣ ಇರುವುದಿಲ್ಲ. ‘ಕೆಐಎಡಿಬಿ’ ನೀತಿಗಳು ಕಾರಣವಿದೆ. ಈ ಹಿನ್ನೆಲೆಯಲ್ಲಿ ದಂಡ ವಿಧಿಸಕೂಡದು ಎಂದು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎ.ಎಸ್.ಸತೀಶ್ ಮನವಿ ಮಾಡಿದರು.</p>.<p>ಅಂತೆಯೇ, ಕೈಗಾರಿಕೆಗಳ ಮೇಲೆ ಗ್ರಾಮ ಪಂಚಾಯಿತಿಗಳೂ ಹೆಚ್ಚಿನ ತೆರಿಗೆ ವಿಧಿಸುತ್ತಿವೆ. ಇದನ್ನು ಕಡಿಮೆಗೊಳಿಸಬೇಕು ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು ಭಾಗದ ಕೈಗಾರಿಕಾ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಶೀಘ್ರವೇ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಭರವಸೆ ನೀಡಿದರು.</p>.<p>ಭಾನುವಾರ ನಡೆದ ಕೈಗಾರಿಕೋದ್ಯಮಿಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಅಹವಾಲುಗಳನ್ನು ಆಲಿಸಿ, ಬಳಿಕ ಮಾತನಾಡಿದರು.</p>.<p>ಹುಬ್ಬಳ್ಳಿ ಮಾದರಿಯಲ್ಲಿ ಮೈಸೂರು ಭಾಗದಲ್ಲೂ ಬಂಡವಾಳ ಹೂಡಿಕೆದಾರ ಸಮಾವೇಶ ನಡೆಸಲಾಗುವುದು. ಪ್ರಾದೇಶಿಕವಾಗಿ ಕೈಗಾರಿಕಾದ್ಯಮವನ್ನು ಅಭಿವೃದ್ಧಿಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.</p>.<p>ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ₹ 72 ಸಾವಿರ ಕೋಟಿ ಮೊತ್ತದ ಒಡಂಬಡಿಕೆಗೆ ಸರ್ಕಾರವು ಸಹಿ ಹಾಕಿದೆ. ರಾಜ್ಯದ ಟೈರ್ 2, ಟೈರ್ 3 ನಗರಗಳಲ್ಲಿ ₹ 1 ಲಕ್ಷ ಕೋಟಿ ಬಂಡವಾಳ ಹೂಡಲು ಹೂಡಿಕೆದಾರರು ಸಿದ್ಧವಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು, ಚಾಮರಾಜನಗರದಂತಹ ನಗರಗಳಿಗೆ ಭವಿಷ್ಯದಲ್ಲಿ ಉತ್ತಮ ಬಂಡವಾಳ ಸಿಗಲಿದೆ ಎಂದು ಅವರು ಮಾಹಿತಿ ನೀಡಿದರು.</p>.<p>ಕೈಗಾರಿಕಾ ಕ್ಷೇತ್ರಗಳಿಗೆ ಮೂಲ ಸೌಕರ್ಯ ನೀಡುವುದೂ ಆದ್ಯತೆಯಾಗಿದೆ. ಆದರೆ, ಅತಿ ಸಣ್ಣ – ಪುಟ್ಟ ಸಮಸ್ಯೆಗಳನ್ನು ನಮ್ಮ ಬಳಿ ತರುವ ಬದಲು, ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಕಾರ್ಯಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p><strong>ಶೀಘ್ರವೇ ಕೈಗಾರಿಕಾ ಅದಾಲತ್</strong></p>.<p>‘ಶೀಘ್ರವೇ ಮೈಸೂರಿನಲ್ಲಿ ಕೈಗಾರಿಕಾ ಅದಾಲತ್ ನಡೆಸಲಾಗುವುದು. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಯ ಸಾವಿರಾರು ಪ್ರಕರಣಗಳು ಬಾಕಿ ಉಳಿದಿವೆ. ಅವನ್ನು ಬಗೆಹರಿಸಬೇಕಿದೆ. ಬೆಂಗಳೂರಿನಲ್ಲಿ ಮೊದಲು ಅದಾಲತ್ ನಡೆಸುತ್ತೇವೆ’ ಎಂದರು.<br /><br />ಅಂತೆಯೇ, ರಾಜ್ಯದಲ್ಲಿ ಒಟ್ಟು ನಾಲ್ಕು ಕೈಗಾರಿಕಾ ಉಪನಗರ ಸ್ಥಾಪನೆಗೆ ಚಿಂತನೆ ನಡೆದಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.</p>.<p>ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಮೈಸೂರು ಕೈಗಾರಿಕೆಗಳ ಸಂಘ, ಭಾರತೀಯ ಕೈಗಾರಿಕಾ ಒಕ್ಕೂಟದ ಜಿಲ್ಲಾ ಶಾಖೆಯ ಪದಾಧಿಕಾರಿಗಳು, ಕೈಗಾರಿಕೋದ್ಯಮಿಗಳು ಭಾಗವಹಿಸಿದ್ದರು.</p>.<p>ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಕಾಂಗ್ರೆಸ್ ಮುಖಂಡ ವಾಸು, ಕೈಗಾರಿಕೋದ್ಯಮಿಗಳಾದ ಸುರೇಶ್ ಕುಮಾರ್ ಜೈನ್, ಸುಧಾಕರ ಎಸ್.ಶೆಟ್ಟಿ ಭಾಗವಹಿಸಿ ಮಾತನಾಡಿದರು.</p>.<p class="Briefhead"><strong>ಉಂಡವಾಡಿ ಯೋಜನೆಗೆ ₹ 25 ಕೋಟಿ</strong></p>.<p>ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಉಂಡವಾಡಿ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ಯೋಜನೆಗಾಗಿ ₹ 25 ಕೋಟಿ ಬಿಡುಗಡೆ ಮಾಡಲಾಗುವುದು ಎಂದರು.</p>.<p>ಕೈಗಾರಿಕಾ ಪ್ರದೇಶಗಳಿಗೆ ನೀರಿನ ಕೊರತೆ ಇದೆ. ಇದನ್ನು ಕೂಡಲೇ ಬಗೆಹರಿಸಬೇಕು ಎಂದು ದೇವೇಗೌಡ ಮನವಿ ಮಾಡಿದರು.</p>.<p class="Briefhead"><strong>ದಂಡ ಹಾಕದಂತೆ ಮನವಿ</strong></p>.<p>ವಿವಿಧ ಯೋಜನೆಗಳನ್ನು ಪೂರ್ಣಗೊಳಿಸದೇ ಇರುವ ಕಾರಣಕ್ಕೆ ‘ಕೆಐಎಡಿಬಿ’ ಉದ್ಯಮಿಗಳ ಮೇಲೆ ದೊಡ್ಡ ಪ್ರಮಾಣದ ದಂಡ ವಿಧಿಸಿದೆ. ಇದನ್ನು ಹಿಂಪಡೆಯಬೇಕು ಎಂದು ಕೈಗಾರಿಕೋದ್ಯಮಿಗಳು ಒತ್ತಾಯಿಸಿದರು.</p>.<p>ಯಾವುದೇ ಯೋಜನೆ ತಡವಾಗುವುದಕ್ಕೆ ಕೈಗಾರಿಕೋದ್ಯಮಿಗಳು ಕಾರಣ ಇರುವುದಿಲ್ಲ. ‘ಕೆಐಎಡಿಬಿ’ ನೀತಿಗಳು ಕಾರಣವಿದೆ. ಈ ಹಿನ್ನೆಲೆಯಲ್ಲಿ ದಂಡ ವಿಧಿಸಕೂಡದು ಎಂದು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎ.ಎಸ್.ಸತೀಶ್ ಮನವಿ ಮಾಡಿದರು.</p>.<p>ಅಂತೆಯೇ, ಕೈಗಾರಿಕೆಗಳ ಮೇಲೆ ಗ್ರಾಮ ಪಂಚಾಯಿತಿಗಳೂ ಹೆಚ್ಚಿನ ತೆರಿಗೆ ವಿಧಿಸುತ್ತಿವೆ. ಇದನ್ನು ಕಡಿಮೆಗೊಳಿಸಬೇಕು ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>