<p><strong>ಮೈಸೂರು: </strong>‘ರಾಷ್ಟ್ರಪಿತ ಮಹಾತ್ಮ ಗಾಂಧಿ ತಮ್ಮ ಕನಸಿನ ರಾಮರಾಜ್ಯವನ್ನು ಮೈಸೂರು ಸಂಸ್ಥಾನದಲ್ಲಿ ಕಂಡಿದ್ದರು’ ಎಂದು ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಬಿ.ಶೇಖ್ಅಲಿ ಗುರುವಾರ ಇಲ್ಲಿ ತಿಳಿಸಿದರು.</p>.<p>ಜಯಚಾಮರಾಜ ಒಡೆಯರ್ ಜನ್ಮಶತಮಾನೋತ್ಸವದ ಅಂಗವಾಗಿ ಮೈಸೂರು ವಿಶ್ವವಿದ್ಯಾಲಯ ಆಯೋಜಿರುವ ಮೂರು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ವಿಶೇಷ ಉಪನ್ಯಾಸದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ‘ಮೈಸೂರು ಅರಸರು ಜನರ ಹೃದಯದಲ್ಲಿ ಸ್ಥಾನ ಪಡೆದವರು’ ಎಂದು ಬಣ್ಣಿಸಿದರು.</p>.<p>‘ಎರಡನೇ ಮಹಾಯುದ್ಧ ಹಾಗೂ ಭಾರತದ ಸ್ವಾತಂತ್ರ್ಯ ಸಂಗ್ರಾಮ ಉತ್ತುಂಗದಲ್ಲಿದ್ದ ಕಾಲ ಘಟ್ಟದಲ್ಲಿ ಜಯಚಾಮರಾಜ ಒಡೆಯರ್ ಮೈಸೂರು ಸಂಸ್ಥಾನದ ಅರಸರಾಗಿದ್ದರು. ತಮ್ಮ ಪೂರ್ವಿಕರು ಜಾರಿಗೊಳಿಸಿದ್ದ ಪ್ರಜಾಪ್ರಭುತ್ವದ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದರು.’</p>.<p>‘ಸ್ವತಂತ್ರ ಭಾರತದ ಮರು ನಿರ್ಮಾಣಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಮಾನವೀಯತೆಯ ಪ್ರತೀಕವಾಗಿದ್ದರು. ಶಿಕ್ಷಣಕ್ಕೆ ಹೆಚ್ಚು ಒತ್ತುಕೊಟ್ಟಿದ್ದರು. ತತ್ವಜ್ಞಾನಿ, ಚಿಂತಕರಾಗಿದ್ದ ಜಯಚಾಮರಾಜ ಒಡೆಯರ್ ಕವಿಯೂ ಆಗಿದ್ದರು. ತಮ್ಮ ಆಡಳಿತದಲ್ಲಿ ಸಾಹಿತ್ಯ, ಕಲೆಗೆ ಯಥೇಚ್ಛ ಪ್ರೋತ್ಸಾಹ ನೀಡಿದವರು’ ಎಂದು ಶೇಖ್ ಅಲಿ ಸ್ಮರಿಸಿಕೊಂಡರು.</p>.<p>ಕುಲಪತಿ ಪ್ರೊ.ಜಿ.ಹೇಮಂತಕುಮಾರ್, ಕುಲಸಚಿವ ಲಿಂಗರಾಜಗಾಂಧಿ, ಪ್ರೊ.ಸೆಬಾಸ್ಟಿಯನ್ ಜೋಸೆಫ್, ವೈ.ಎಚ್.ನಾಯಕವಾಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ರಾಷ್ಟ್ರಪಿತ ಮಹಾತ್ಮ ಗಾಂಧಿ ತಮ್ಮ ಕನಸಿನ ರಾಮರಾಜ್ಯವನ್ನು ಮೈಸೂರು ಸಂಸ್ಥಾನದಲ್ಲಿ ಕಂಡಿದ್ದರು’ ಎಂದು ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಬಿ.ಶೇಖ್ಅಲಿ ಗುರುವಾರ ಇಲ್ಲಿ ತಿಳಿಸಿದರು.</p>.<p>ಜಯಚಾಮರಾಜ ಒಡೆಯರ್ ಜನ್ಮಶತಮಾನೋತ್ಸವದ ಅಂಗವಾಗಿ ಮೈಸೂರು ವಿಶ್ವವಿದ್ಯಾಲಯ ಆಯೋಜಿರುವ ಮೂರು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ವಿಶೇಷ ಉಪನ್ಯಾಸದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ‘ಮೈಸೂರು ಅರಸರು ಜನರ ಹೃದಯದಲ್ಲಿ ಸ್ಥಾನ ಪಡೆದವರು’ ಎಂದು ಬಣ್ಣಿಸಿದರು.</p>.<p>‘ಎರಡನೇ ಮಹಾಯುದ್ಧ ಹಾಗೂ ಭಾರತದ ಸ್ವಾತಂತ್ರ್ಯ ಸಂಗ್ರಾಮ ಉತ್ತುಂಗದಲ್ಲಿದ್ದ ಕಾಲ ಘಟ್ಟದಲ್ಲಿ ಜಯಚಾಮರಾಜ ಒಡೆಯರ್ ಮೈಸೂರು ಸಂಸ್ಥಾನದ ಅರಸರಾಗಿದ್ದರು. ತಮ್ಮ ಪೂರ್ವಿಕರು ಜಾರಿಗೊಳಿಸಿದ್ದ ಪ್ರಜಾಪ್ರಭುತ್ವದ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದರು.’</p>.<p>‘ಸ್ವತಂತ್ರ ಭಾರತದ ಮರು ನಿರ್ಮಾಣಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಮಾನವೀಯತೆಯ ಪ್ರತೀಕವಾಗಿದ್ದರು. ಶಿಕ್ಷಣಕ್ಕೆ ಹೆಚ್ಚು ಒತ್ತುಕೊಟ್ಟಿದ್ದರು. ತತ್ವಜ್ಞಾನಿ, ಚಿಂತಕರಾಗಿದ್ದ ಜಯಚಾಮರಾಜ ಒಡೆಯರ್ ಕವಿಯೂ ಆಗಿದ್ದರು. ತಮ್ಮ ಆಡಳಿತದಲ್ಲಿ ಸಾಹಿತ್ಯ, ಕಲೆಗೆ ಯಥೇಚ್ಛ ಪ್ರೋತ್ಸಾಹ ನೀಡಿದವರು’ ಎಂದು ಶೇಖ್ ಅಲಿ ಸ್ಮರಿಸಿಕೊಂಡರು.</p>.<p>ಕುಲಪತಿ ಪ್ರೊ.ಜಿ.ಹೇಮಂತಕುಮಾರ್, ಕುಲಸಚಿವ ಲಿಂಗರಾಜಗಾಂಧಿ, ಪ್ರೊ.ಸೆಬಾಸ್ಟಿಯನ್ ಜೋಸೆಫ್, ವೈ.ಎಚ್.ನಾಯಕವಾಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>