ಬೆಟ್ಟದ ಗ್ರಾಮಸ್ಥರು ಸೇರಿಕೊಂಡು ತಮ್ಮದೇ ಖರ್ಚಿನಲ್ಲಿ ಪುತ್ಥಳಿ ನಿರ್ಮಿಸಿ, ಅನಾವರಣ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಶಿಲ್ಪಿ ಸೂರ್ಯಪ್ರಕಾಶ್ ಅವರು ಮೂರೂವರೆ ಅಡಿ ಎತ್ತರದ ಪುತ್ಥಳಿ ನಿರ್ಮಿಸಿದ್ದಾರೆ.
'ಚಾಮುಂಡಿ ಬೆಟ್ಟದ ಗ್ರಾಮಸ್ಥರು ಜಯಚಾಮರಾಜೇಂದ್ರ ಒಡೆಯರ್ ಪುತ್ಥಳಿ ನಿರ್ಮಿಸಿರುವುದು ತುಂಬಾ ಸಂತೋಷ. ಈ ಮೂಲಕ ಮಹಾರಾಜರ ಕೊಡುಗೆಗಳನ್ನು ಸ್ಮರಿಸುವ ಕೆಲಸ ಮಾಡಿದ್ದಾರೆ' ಎಂದು ಪ್ರಮೋದಾದೇವಿ ಹೇಳಿದರು.
ಪುತ್ಥಳಿ ಅನಾವರಣ ಸಮಯದಲ್ಲೇ ಚಾಮುಂಡಿ ಬೆಟ್ಟಕ್ಕೆ ಬಂದಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ ಮತ್ತು ಶಾಸಕ ಜಿ.ಟಿ.ದೇವೇಗೌಡ ಅವರೂ ಕಾರ್ಯಕ್ರಮದಲ್ಲಿ ಭಾಗಿಯಾದರು.