ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂ.19ಕ್ಕೆ ಜೆಡಿಎಸ್‌ನಿಂದ ‘ಜನತಾ ವೇದಿಕೆಯಲ್ಲಿ ಸಮಾವೇಶ’

Last Updated 18 ಜೂನ್ 2022, 11:29 IST
ಅಕ್ಷರ ಗಾತ್ರ

ಮೈಸೂರು: ‘ಜಾತ್ಯತೀತ ಜನತಾ ದಳ(ಜೆಡಿಎಸ್‌)ಗೆ ಪ್ರಮುಖರ ಸೇರ್ಪಡೆ ಹಾಗೂ ಜನತಾ ವೇದಿಕೆಯಲ್ಲಿ ಸಮಾವೇಶವನ್ನು ಜೂನ್‌ 19ರಂದು ಸಂಜೆ 4ಕ್ಕೆ ಬನ್ನಿಮಂಟಪದ ಜೋಡಿ ತೆಂಗಿನ ಮರ ರಸ್ತೆಯ ಮೈದಾನದಲ್ಲಿ ಆಯೋಜಿಸಲಾಗಿದೆ’ ಎಂದು ಪಕ್ಷದ ನಗರ ಘಟಕದ ಅಧ್ಯಕ್ಷ ಕೆ.ಟಿ. ಚೆಲುವೇಗೌಡ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಉದ್ಘಾಟಿಸಲಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅಧ್ಯಕ್ಷತೆ ವಹಿಸಲಿದ್ದಾರೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಮುಖಂಡ ಅಬ್ದುಲ್ ಅಜೀಜ್‌ ನೇತೃತ್ವದಲ್ಲಿ ಸಮಾವೇಶ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘ಎನ್.ಆರ್. ಕ್ಷೇತ್ರದ ಮುಖಂಡ ಅಬ್ದುಲ್‌ ಖಾದರ್ (ಶಾಯಿದ್) ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಪಕ್ಷವನ್ನು ತೊರೆದು ಜೆಡಿಎಸ್‌ ಸೇರ್ಪಡೆಯಾಗಲಿದ್ದಾರೆ. ಪಕ್ಷದ ಸಿದ್ಧಾಂತವನ್ನು ಮೆಚ್ಚಿ ಯಾವುದೇ ಷರತ್ತಿಲ್ಲದೆ ಬರುತ್ತಿದ್ದಾರೆ. ಸಮಾವೇಶಕ್ಕೆ ಮುನ್ನ, ಹೈವೆ ವೃತ್ತದಿಂದ ಮುಖಂಡರನ್ನು ಬೃಹತ್‌ ಮೆರವಣಿಗೆಯಲ್ಲಿ ಕರೆತರಲಾಗುವುದು’ ಎಂದರು.

ಪ್ರಧಾನ ಕಾರ್ಯದರ್ಶಿ ಆರ್. ಮುದ್ದುರಾಜ್‌, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಶಂಕರೇಗೌಡ, ಎನ್.ಆರ್. ಕ್ಷೇತ್ರದ ಅಧ್ಯಕ್ಷ ಎಂ.ಎನ್. ರಾಮು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT