<p><strong>ಮೈಸೂರು</strong>: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಜೆಡಿಎಸ್ ಸದಸ್ಯೆ ರುಕ್ಮಿಣಿ ಮಾದೇಗೌಡ ಮತ್ತು ಉಪ ಮೇಯರ್ ಆಗಿ ಕಾಂಗ್ರೆಸ್ ಸದಸ್ಯ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ.</p>.<p>ಬಿಜೆಪಿ ಲೆಕ್ಕಾಚಾರ ತಲೆಕೆಳಗಾಗಿದ್ದು, ಜೆಡಿಎಸ್–ಕಾಂಗ್ರೆಸ್ ಮೈತ್ರಿ ಮುಂದುವರಿದಿದೆ.</p>.<p>ಬುಧವಾರ ನಡೆದ ಚುನಾವಣೆಯಲ್ಲಿ ರುಕ್ಮಿಣಿ ಮಾದೇಗೌಡ, ಅನ್ವರ್ ಬೇಗ್ ತಲಾ 43 ಮತ ಗಳಿಸಿ ಗೆಲುವಿನ ನಗೆ ಬೀರಿದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಸುನಂದಾ ಪಾಲನೇತ್ರ, ಸಾತ್ವಿಕ್ ತಲಾ 26 ಮತಗಳಿಸಿ ಪರಾಭವಗೊಂಡರು.</p>.<p>ಕೊನೆ ಕ್ಷಣದವರೆಗೂ ಕುತೂಹಲ ಕೆರಳಿಸಿದ್ದ ಮೇಯರ್–ಉಪ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ, ಮೂರೂ ಪಕ್ಷಗಳು ಬುಧವಾರವೂ ಸರಣಿ ಸಭೆ ನಡೆಸಿದವು. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡರೂ, ಮೈತ್ರಿ ನಿರ್ಧಾರವಾಗಿರಲಿಲ್ಲ.</p>.<p>ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ನ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಾಲಿಕೆ ಸದಸ್ಯರನ್ನು ಖುದ್ದು ಭೇಟಿ ಮಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಬಿಜೆಪಿಗೆ ಸಹಕರಿಸುವಂತೆ ಕೋರಿದ್ದರೂ ಕೊನೆ ಕ್ಷಣದಲ್ಲಿ ಬಿಜೆಪಿ–ಜೆಡಿಎಸ್ನ ಮೈತ್ರಿಕೂಟ ರಚನೆಯಾಗಲಿಲ್ಲ.</p>.<p>ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಮೊಬೈಲ್ನಲ್ಲಿ ಮಾತನಾಡಿಸಿದ್ದು, ಕಾಂಗ್ರೆಸ್– ಜೆಡಿಎಸ್ನ ಮೈತ್ರಿ ಮುಂದುವರಿಯಲು ಕಾರಣವಾಯಿತು ಎನ್ನಲಾಗಿದೆ.</p>.<p>ಈ ಹಿಂದಿನ ಒಪ್ಪಂದದಂತೆ, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯು ಮೇಯರ್ ಸ್ಥಾನ ಅಲಂಕರಿಸಬೇಕಿತ್ತು. ಪಕ್ಷದೊಳಗಿನ ನಾಯಕತ್ವದ ಪೈಪೋಟಿಯೇ ಜೆಡಿಎಸ್ಗೆ ಮೇಯರ್ ಸ್ಥಾನ ಬಿಟ್ಟುಕೊಟ್ಟಿದೆ ಎಂಬ ಮಾತು ಕಾಂಗ್ರೆಸ್ ಪಾಳೆಯದಿಂದ ಕೇಳಿ ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಜೆಡಿಎಸ್ ಸದಸ್ಯೆ ರುಕ್ಮಿಣಿ ಮಾದೇಗೌಡ ಮತ್ತು ಉಪ ಮೇಯರ್ ಆಗಿ ಕಾಂಗ್ರೆಸ್ ಸದಸ್ಯ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ.</p>.<p>ಬಿಜೆಪಿ ಲೆಕ್ಕಾಚಾರ ತಲೆಕೆಳಗಾಗಿದ್ದು, ಜೆಡಿಎಸ್–ಕಾಂಗ್ರೆಸ್ ಮೈತ್ರಿ ಮುಂದುವರಿದಿದೆ.</p>.<p>ಬುಧವಾರ ನಡೆದ ಚುನಾವಣೆಯಲ್ಲಿ ರುಕ್ಮಿಣಿ ಮಾದೇಗೌಡ, ಅನ್ವರ್ ಬೇಗ್ ತಲಾ 43 ಮತ ಗಳಿಸಿ ಗೆಲುವಿನ ನಗೆ ಬೀರಿದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಸುನಂದಾ ಪಾಲನೇತ್ರ, ಸಾತ್ವಿಕ್ ತಲಾ 26 ಮತಗಳಿಸಿ ಪರಾಭವಗೊಂಡರು.</p>.<p>ಕೊನೆ ಕ್ಷಣದವರೆಗೂ ಕುತೂಹಲ ಕೆರಳಿಸಿದ್ದ ಮೇಯರ್–ಉಪ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ, ಮೂರೂ ಪಕ್ಷಗಳು ಬುಧವಾರವೂ ಸರಣಿ ಸಭೆ ನಡೆಸಿದವು. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡರೂ, ಮೈತ್ರಿ ನಿರ್ಧಾರವಾಗಿರಲಿಲ್ಲ.</p>.<p>ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ನ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಾಲಿಕೆ ಸದಸ್ಯರನ್ನು ಖುದ್ದು ಭೇಟಿ ಮಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಬಿಜೆಪಿಗೆ ಸಹಕರಿಸುವಂತೆ ಕೋರಿದ್ದರೂ ಕೊನೆ ಕ್ಷಣದಲ್ಲಿ ಬಿಜೆಪಿ–ಜೆಡಿಎಸ್ನ ಮೈತ್ರಿಕೂಟ ರಚನೆಯಾಗಲಿಲ್ಲ.</p>.<p>ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಮೊಬೈಲ್ನಲ್ಲಿ ಮಾತನಾಡಿಸಿದ್ದು, ಕಾಂಗ್ರೆಸ್– ಜೆಡಿಎಸ್ನ ಮೈತ್ರಿ ಮುಂದುವರಿಯಲು ಕಾರಣವಾಯಿತು ಎನ್ನಲಾಗಿದೆ.</p>.<p>ಈ ಹಿಂದಿನ ಒಪ್ಪಂದದಂತೆ, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯು ಮೇಯರ್ ಸ್ಥಾನ ಅಲಂಕರಿಸಬೇಕಿತ್ತು. ಪಕ್ಷದೊಳಗಿನ ನಾಯಕತ್ವದ ಪೈಪೋಟಿಯೇ ಜೆಡಿಎಸ್ಗೆ ಮೇಯರ್ ಸ್ಥಾನ ಬಿಟ್ಟುಕೊಟ್ಟಿದೆ ಎಂಬ ಮಾತು ಕಾಂಗ್ರೆಸ್ ಪಾಳೆಯದಿಂದ ಕೇಳಿ ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>