<p><strong>ಮೈಸೂರು:</strong> ‘ವಿಶೇಷ ವ್ಯಕ್ತಿಗಳಲ್ಲಿರುವ ಪ್ರತಿಭೆ ಗುರುತಿಸಿ, ಅವರಿಗೆ ಆತ್ಮವಿಶ್ವಾಸ ತುಂಬಬೇಕು’ ಎಂದು ಶಾಸಕ ಎಲ್. ನಾಗೇಂದ್ರ ತಿಳಿಸಿದರು.</p>.<p>ಸಮರ್ಥನಂ ಅಂಗವಿಕಲರ ಸಂಸ್ಥೆಯು ನಗರದ ಕರ್ಜನ್ ಉದ್ಯಾನದ ಡಾ.ಮರಿಗೌಡ ಸಭಾಂಗಣದಲ್ಲಿ ಅಂಗವಿಕಲರಿಗೆ ಗುರುವಾರ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ 2ನೇ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂಗವಿಕಲರು ಸಮಾಜದ ಮುಖ್ಯವಾಹಿನಿಗೆ ಬರಲೆಂದು ಸಮರ್ಥನಂ ಅಂಗವಿಕಲರ ಸಂಸ್ಥೆಯಿಂದ ಅಗತ್ಯ ಸಹಕಾರ ಕೊಡುತ್ತಿರುವುದು ಶ್ಲಾಘನೀಯವಾದುದು. ಸಬಲೀಕರಣಕ್ಕಾಗಿ ಉದ್ಯೋಗ ಮೇಳವನ್ನೂ ನಡೆಸುತ್ತಿರುವುದು ಅಭಿನಂದನಾರ್ಹ’ ಎಂದರು.</p>.<p>ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಾಲಿನಿ ಮಾತನಾಡಿ, ‘ಅಂಗವಿಕಲರು ಸಾಮಾನ್ಯರಿಗಿಂತಲೂ ಹೆಚ್ಚು ಕೆಲಸ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಯಾವುದೇ ಆತಂಕವಿಲ್ಲದೆ ಉತ್ಪಾದನಾ ಕ್ಷೇತ್ರದ ಕಾರ್ಖಾನೆಗಳಲ್ಲಿ ದುಡಿಯುತ್ತಿದ್ದಾರೆ’ ಎಂದು ಹೇಳಿದರು.</p>.<p>ಸಮರ್ಥನಂ ಸಂಸ್ಥೆಯ ಕೌಶಲ ಅಧಿಕಾರಿ ಚಂದ್ರಶೇಖರ್, ಟ್ರಸ್ಟಿ ವಸಂತಿ ಮಾತನಾಡಿದರು.</p>.<p>ಮೇಳದಲ್ಲಿ 22 ಕಂಪನಿಗಳು, 263 ಅಭ್ಯರ್ಥಿಗಳು ಭಾಗವಹಿಸಿದ್ದರು. 147 ಮಂದಿ ಉದ್ಯೋಗ ಮತ್ತು ಮುಂದಿನ ಹಂತಕ್ಕೆ ಆಯ್ಕೆಯಾದರು.</p>.<p>ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಆಶ್ವಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಮೈಸೂರು ವಿಭಾಗದ ಸಂಯೋಜಕ ಶಿವರಾಜು, ಸತೀಶ್ ನಾಯರ್, ಸುಭಾಷ್ ಚಂದ್ರ, ವೀರಭದ್ರ ಪಾಟೇಲ, ಜೆಸ್ಟೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ವಿಶೇಷ ವ್ಯಕ್ತಿಗಳಲ್ಲಿರುವ ಪ್ರತಿಭೆ ಗುರುತಿಸಿ, ಅವರಿಗೆ ಆತ್ಮವಿಶ್ವಾಸ ತುಂಬಬೇಕು’ ಎಂದು ಶಾಸಕ ಎಲ್. ನಾಗೇಂದ್ರ ತಿಳಿಸಿದರು.</p>.<p>ಸಮರ್ಥನಂ ಅಂಗವಿಕಲರ ಸಂಸ್ಥೆಯು ನಗರದ ಕರ್ಜನ್ ಉದ್ಯಾನದ ಡಾ.ಮರಿಗೌಡ ಸಭಾಂಗಣದಲ್ಲಿ ಅಂಗವಿಕಲರಿಗೆ ಗುರುವಾರ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ 2ನೇ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂಗವಿಕಲರು ಸಮಾಜದ ಮುಖ್ಯವಾಹಿನಿಗೆ ಬರಲೆಂದು ಸಮರ್ಥನಂ ಅಂಗವಿಕಲರ ಸಂಸ್ಥೆಯಿಂದ ಅಗತ್ಯ ಸಹಕಾರ ಕೊಡುತ್ತಿರುವುದು ಶ್ಲಾಘನೀಯವಾದುದು. ಸಬಲೀಕರಣಕ್ಕಾಗಿ ಉದ್ಯೋಗ ಮೇಳವನ್ನೂ ನಡೆಸುತ್ತಿರುವುದು ಅಭಿನಂದನಾರ್ಹ’ ಎಂದರು.</p>.<p>ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಾಲಿನಿ ಮಾತನಾಡಿ, ‘ಅಂಗವಿಕಲರು ಸಾಮಾನ್ಯರಿಗಿಂತಲೂ ಹೆಚ್ಚು ಕೆಲಸ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಯಾವುದೇ ಆತಂಕವಿಲ್ಲದೆ ಉತ್ಪಾದನಾ ಕ್ಷೇತ್ರದ ಕಾರ್ಖಾನೆಗಳಲ್ಲಿ ದುಡಿಯುತ್ತಿದ್ದಾರೆ’ ಎಂದು ಹೇಳಿದರು.</p>.<p>ಸಮರ್ಥನಂ ಸಂಸ್ಥೆಯ ಕೌಶಲ ಅಧಿಕಾರಿ ಚಂದ್ರಶೇಖರ್, ಟ್ರಸ್ಟಿ ವಸಂತಿ ಮಾತನಾಡಿದರು.</p>.<p>ಮೇಳದಲ್ಲಿ 22 ಕಂಪನಿಗಳು, 263 ಅಭ್ಯರ್ಥಿಗಳು ಭಾಗವಹಿಸಿದ್ದರು. 147 ಮಂದಿ ಉದ್ಯೋಗ ಮತ್ತು ಮುಂದಿನ ಹಂತಕ್ಕೆ ಆಯ್ಕೆಯಾದರು.</p>.<p>ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಆಶ್ವಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಮೈಸೂರು ವಿಭಾಗದ ಸಂಯೋಜಕ ಶಿವರಾಜು, ಸತೀಶ್ ನಾಯರ್, ಸುಭಾಷ್ ಚಂದ್ರ, ವೀರಭದ್ರ ಪಾಟೇಲ, ಜೆಸ್ಟೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>