ಮೈಸೂರು: ‘ಸೇವಾ ಚಿಲುಮೆ ಚಾರಿಬಟಲ್ ಟ್ರಸ್ಟ್ನಿಂದ ಸೆ.3ರಂದು ಬೆಳಿಗ್ಗೆ 9ಕ್ಕೆ ರಾಜೇಂದ್ರ ನಗರದ (ಕೆಸರೆ) ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ಟ್ರಸ್ಟ್ ಅಧ್ಯಕ್ಷ ಕಾರ್ತಿಕ್ ಮರಿಯಪ್ಪ ತಿಳಿಸಿದರು.
‘45 ವಿವಿಧ ಕಂಪನಿಗಳು ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ವಿದ್ಯಾರ್ಥಿಯತೆಯವರು ಪಾಲ್ಗೊಳ್ಳಬಹುದು. ನಿರುದ್ಯೋಗಿಗಳು ಉದ್ಯೋಗ ಕಂಡುಕೊಳ್ಳಲು ನೆರವಾಗುವ ಉದ್ದೇಶದಿಂದ ಮೇಳ ನಡೆಸಲಾಗುತ್ತಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾಹಿತಿ ನೀಡಿದರು.