<p><strong>ಮೈಸೂರು: </strong>‘ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಲ್ಲಿ ಕೆಲಸಗಳು ಖಾಲಿ ಇವೆ. ಆದರೆ, ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ’</p>.<p>–ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೋಮವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಶಿಶಿಕ್ಷು ಮೇಳ ಹಾಗೂ ಉದ್ದಿಮೆದಾರರೊಂದಿಗೆ ಸಂವಾದದಲ್ಲಿ ಪಾಲ್ಗೊಂಡ ಹಲವು ಉದ್ದಿಮೆದಾರರು ಹೀಗೆ ಅಭ್ಯರ್ಥಿಗಳ ಕೊರತೆಯ ಕಡೆಗೆ ಗಮನ ಸೆಳೆದರು.</p>.<p>‘ಐಟಿಐ ಮುಗಿಸಿದ ಅಭ್ಯರ್ಥಿಗಳು ಎಲ್ಲಿಗೆ ಹೋಗುತ್ತಿದ್ದಾರೆ ಎಂಬುದೇ ಗೊತ್ತಾಗುತ್ತಿಲ್ಲ. ಹಲವರು ಡಿಪ್ಲೊಮಾ ನಂತರ ಎಂಜಿನಿಯರಿಂಗ್ ಕಡೆಗೆ ಆಸಕ್ತಿ ತೋರುತ್ತಿದ್ದಾರೆ. ಆದರೆ, ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಎಂಜಿನಿಯರ್ಗಳ ಅಗತ್ಯ ಇಲ್ಲ’ ಎಂದು ಉದ್ಯಮಿ ಎನ್.ಸತೀಶ್ಹೇಳಿದರು.</p>.<p>‘ಮಿಷನಿಸ್ಟ್, ಫಿಟ್ಟರ್ ಸೇರಿದಂತೆ ಐಟಿಐ ತರಬೇತಿ ಪಡೆದವರೇ ಹೆಚ್ಚು ಬೇಕಾಗಿದ್ದಾರೆ’ ಎಂಬ ಅವರ ಮಾತಿಗೆ ಮತ್ತೊಬ್ಬ ಉದ್ಯಮಿ ಮಂಜುನಾಥ್ ದನಿಗೂಡಿಸಿದರು.</p>.<p>ಅವರಿಗೆ ಪ್ರತಿಕ್ರಿಯಿಸಿದ, ಕೌಶಲ ಅಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ’ಉದ್ಯೋಗದಾತರು ಮತ್ತು ಉದ್ಯೋಗಾಂಕ್ಷಿಗಳನ್ನು ಬೆಸೆಯ ಲೆಂದೇ ‘ಸ್ಕಿಲ್ ಕನೆಕ್ಟ್’ ವೆಬ್ಸೈಟ್ ಅನ್ನು ರೂಪಿಸಲಾಗಿದೆ. ಉದ್ಯಮಿಗಳು ಖಾಲಿ ಇರುವ ಉದ್ಯೋಗಗಳ ಕುರಿತ ಮಾಹಿತಿಯನ್ನು ನೀಡಿದರೆ ಅಭ್ಯರ್ಥಿ ಗಳು ಸಿಗುತ್ತಾರೆ’ ಎಂದು ಹೇಳಿದರು.</p>.<p>‘ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿಗಳು ಸ್ಕಿಲ್ ಕನೆಕ್ಟ್ ವೆಬ್ಸೈಟ್ಗೆ ಉದ್ಯಮಿಗಳನ್ನು ನೋಂದಾಯಿಸಬೇಕು. ಅಭ್ಯರ್ಥಿಗಳೂ ವಿವರಗಳನ್ನು ದಾಖಲಿಸ ಬೇಕು. ಆ ಕುರಿತು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದು ತಿಳಿಸಿದರು.</p>.<p>ಸಂಸ್ಥೆಯ ತರಬೇತುದಾರ ಗೋವಿಂದರಾಜು ಮಾತನಾಡಿ, ‘ಟೂಲ್ಕಿಟ್ ಹಾಗೂ ಸಮವಸ್ತ್ರಗಳನ್ನು ಎಲ್ಲ ಜಾತಿಯ ಬಡವರಿಗೂ ನೀಡಬೇಕು’ ಎಂದು ಮನವಿ ಮಾಡಿದರು. ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.</p>.<p>ಮಣಿಸುಂದರ್ ಎಂಬುವವರು ಮಾತನಾಡಿ, ‘2018ರಲ್ಲಿ ಸ್ಕಿಲ್ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಗೇಮ್ ಆ್ಯಪ್ ಡೆವಲಪ್ಮೆಂಟ್ ಕುರಿತ ತರಬೇತಿಗೆ ನೋಂದಾಯಿಸಿಕೊಂಡಿದ್ದೆ. ಇದುವರೆವಿಗೂ ಪ್ರತಿಕ್ರಿಯೆ ದೊರೆತಿಲ್ಲ’ ಎಂದು ದೂರಿದರು.</p>.<p>‘ಜಿಲ್ಲೆಯಲ್ಲಿ ಐಟಿ, ಬಿಟಿ, ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯನ್ನು ಇಲ್ಲಿ ಸ್ಥಾಪಿಸಬೇಕು’ ಎಂಬಮೈಸೂರು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಸತೀಶ್ ಮನವಿಗೆ ಸ್ಪಂದಿಸಿದ ಸಚಿವರು, ‘ಆ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ’ಎಂದರು.</p>.<p>ಅಂಪ್ರೆಟಿಷಿಪ್ಗೆ ಆಯ್ಕೆಯಾದವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪಾಲಿಕೆ ಸದಸ್ಯ ಮಹಮ್ಮದ್ ರಫೀಕ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ಕುಮಾರ್ ಗೌಡ, ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ಕುಮಾರ್ ಜೈನ್, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಎಸ್.ಜಗನ್ನಾಥ್, ಉದ್ಯೋಗಾಧಿಕಾರಿ ರಾಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಲ್ಲಿ ಕೆಲಸಗಳು ಖಾಲಿ ಇವೆ. ಆದರೆ, ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ’</p>.<p>–ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೋಮವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಶಿಶಿಕ್ಷು ಮೇಳ ಹಾಗೂ ಉದ್ದಿಮೆದಾರರೊಂದಿಗೆ ಸಂವಾದದಲ್ಲಿ ಪಾಲ್ಗೊಂಡ ಹಲವು ಉದ್ದಿಮೆದಾರರು ಹೀಗೆ ಅಭ್ಯರ್ಥಿಗಳ ಕೊರತೆಯ ಕಡೆಗೆ ಗಮನ ಸೆಳೆದರು.</p>.<p>‘ಐಟಿಐ ಮುಗಿಸಿದ ಅಭ್ಯರ್ಥಿಗಳು ಎಲ್ಲಿಗೆ ಹೋಗುತ್ತಿದ್ದಾರೆ ಎಂಬುದೇ ಗೊತ್ತಾಗುತ್ತಿಲ್ಲ. ಹಲವರು ಡಿಪ್ಲೊಮಾ ನಂತರ ಎಂಜಿನಿಯರಿಂಗ್ ಕಡೆಗೆ ಆಸಕ್ತಿ ತೋರುತ್ತಿದ್ದಾರೆ. ಆದರೆ, ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಎಂಜಿನಿಯರ್ಗಳ ಅಗತ್ಯ ಇಲ್ಲ’ ಎಂದು ಉದ್ಯಮಿ ಎನ್.ಸತೀಶ್ಹೇಳಿದರು.</p>.<p>‘ಮಿಷನಿಸ್ಟ್, ಫಿಟ್ಟರ್ ಸೇರಿದಂತೆ ಐಟಿಐ ತರಬೇತಿ ಪಡೆದವರೇ ಹೆಚ್ಚು ಬೇಕಾಗಿದ್ದಾರೆ’ ಎಂಬ ಅವರ ಮಾತಿಗೆ ಮತ್ತೊಬ್ಬ ಉದ್ಯಮಿ ಮಂಜುನಾಥ್ ದನಿಗೂಡಿಸಿದರು.</p>.<p>ಅವರಿಗೆ ಪ್ರತಿಕ್ರಿಯಿಸಿದ, ಕೌಶಲ ಅಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ’ಉದ್ಯೋಗದಾತರು ಮತ್ತು ಉದ್ಯೋಗಾಂಕ್ಷಿಗಳನ್ನು ಬೆಸೆಯ ಲೆಂದೇ ‘ಸ್ಕಿಲ್ ಕನೆಕ್ಟ್’ ವೆಬ್ಸೈಟ್ ಅನ್ನು ರೂಪಿಸಲಾಗಿದೆ. ಉದ್ಯಮಿಗಳು ಖಾಲಿ ಇರುವ ಉದ್ಯೋಗಗಳ ಕುರಿತ ಮಾಹಿತಿಯನ್ನು ನೀಡಿದರೆ ಅಭ್ಯರ್ಥಿ ಗಳು ಸಿಗುತ್ತಾರೆ’ ಎಂದು ಹೇಳಿದರು.</p>.<p>‘ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿಗಳು ಸ್ಕಿಲ್ ಕನೆಕ್ಟ್ ವೆಬ್ಸೈಟ್ಗೆ ಉದ್ಯಮಿಗಳನ್ನು ನೋಂದಾಯಿಸಬೇಕು. ಅಭ್ಯರ್ಥಿಗಳೂ ವಿವರಗಳನ್ನು ದಾಖಲಿಸ ಬೇಕು. ಆ ಕುರಿತು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದು ತಿಳಿಸಿದರು.</p>.<p>ಸಂಸ್ಥೆಯ ತರಬೇತುದಾರ ಗೋವಿಂದರಾಜು ಮಾತನಾಡಿ, ‘ಟೂಲ್ಕಿಟ್ ಹಾಗೂ ಸಮವಸ್ತ್ರಗಳನ್ನು ಎಲ್ಲ ಜಾತಿಯ ಬಡವರಿಗೂ ನೀಡಬೇಕು’ ಎಂದು ಮನವಿ ಮಾಡಿದರು. ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.</p>.<p>ಮಣಿಸುಂದರ್ ಎಂಬುವವರು ಮಾತನಾಡಿ, ‘2018ರಲ್ಲಿ ಸ್ಕಿಲ್ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಗೇಮ್ ಆ್ಯಪ್ ಡೆವಲಪ್ಮೆಂಟ್ ಕುರಿತ ತರಬೇತಿಗೆ ನೋಂದಾಯಿಸಿಕೊಂಡಿದ್ದೆ. ಇದುವರೆವಿಗೂ ಪ್ರತಿಕ್ರಿಯೆ ದೊರೆತಿಲ್ಲ’ ಎಂದು ದೂರಿದರು.</p>.<p>‘ಜಿಲ್ಲೆಯಲ್ಲಿ ಐಟಿ, ಬಿಟಿ, ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯನ್ನು ಇಲ್ಲಿ ಸ್ಥಾಪಿಸಬೇಕು’ ಎಂಬಮೈಸೂರು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಸತೀಶ್ ಮನವಿಗೆ ಸ್ಪಂದಿಸಿದ ಸಚಿವರು, ‘ಆ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ’ಎಂದರು.</p>.<p>ಅಂಪ್ರೆಟಿಷಿಪ್ಗೆ ಆಯ್ಕೆಯಾದವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪಾಲಿಕೆ ಸದಸ್ಯ ಮಹಮ್ಮದ್ ರಫೀಕ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ಕುಮಾರ್ ಗೌಡ, ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ಕುಮಾರ್ ಜೈನ್, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಎಸ್.ಜಗನ್ನಾಥ್, ಉದ್ಯೋಗಾಧಿಕಾರಿ ರಾಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>