ಸಮ್ಮೇಳನ ಉದ್ಘಾಟಿಸಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ‘ಮೈಸೂರು ರಾಜ ಮನೆತನವು ಶಿಕ್ಷಣ, ಆರೋಗ್ಯ ಮತ್ತು ವಿಜ್ಞಾನ–ತಂತ್ರಜ್ಞಾನ ಸೇರಿದಂತೆ, ಮುಂತಾದ ಕ್ಷೇತ್ರಗಳಿಗೆ ಮಹತ್ತರವಾದ ಕೊಡುಗೆ ನೀಡಿದೆ. ಎಲ್ಲಾ ಕ್ಷೇತ್ರಗಳಿಗೂ ಪ್ರೋತ್ಸಾಹ ನೀಡಿದೆ. ಇದರ ಫಲವಾಗಿ ಮೈಸೂರು ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ’ ಎಂದರು.