<p><strong>ಮೈಸೂರು</strong>: ‘ಧಮ್ ಇರೋದಕ್ಕೆ ಸರ್ಕಾರ ರಚಿಸಿದ್ದೇವೆ. 25 ಸಂಸದ ಸ್ಥಾನ ಗೆದ್ದಿದ್ದೇವೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಶುಕ್ರವಾರ ನಗರದಲ್ಲಿ ತಿರುಗೇಟು ನೀಡಿದರು.</p>.<p>‘ಜಾತಿ ಹೆಸರಿನಲ್ಲಿ ಕೆಟ್ಟ ರಾಜಕಾರಣ ಮಾಡುವ ನೀವು ಕುರುಬರಿಗೆ ಎಷ್ಟು ಸೀಟ್ ಕೊಟ್ಟೀರಿ. ಶಂಕರ್, ಎಂ.ಟಿ.ಬಿ.ನಾಗರಾಜ್ ಕುರುಬರು ಅಂತ ಅವಕಾಶ ಕೊಟ್ಟಿಲ್ಲ. ಸರ್ಕಾರ ರಚಿಸೋಕೆ ಕಾರಣರಾದವರು ಎಂದು ಕೊಟ್ಟಿದ್ದೇವೆ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ತಿಳಿಸಿದರು.</p>.<p>‘ಧಮ್ ಇದ್ದೋರು ಮುಖ್ಯಮಂತ್ರಿಯಿದ್ದಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದೀರಿ. ಕೀಳು ಭಾಷೆ ಬಳಸಿರೋದಕ್ಕೆ ರಾಜ್ಯದ ಜನರ ಕ್ಷಮೆ ಕೋರಿ’ ಎಂದು ಈಶ್ವರಪ್ಪ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/b-s-yediyurappa-siddaramaiah-karnataka-govt-737915.html" target="_blank">ಬಿ.ಎಸ್.ಯಡಿಯೂರಪ್ಪಗೆ ಧಮ್ ಇಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ</a></p>.<p>‘ಎಚ್.ವಿಶ್ವನಾಥ್ಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಧಮ್ ಇರೋದಕ್ಕೆ ಸರ್ಕಾರ ರಚಿಸಿದ್ದೇವೆ. 25 ಸಂಸದ ಸ್ಥಾನ ಗೆದ್ದಿದ್ದೇವೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಶುಕ್ರವಾರ ನಗರದಲ್ಲಿ ತಿರುಗೇಟು ನೀಡಿದರು.</p>.<p>‘ಜಾತಿ ಹೆಸರಿನಲ್ಲಿ ಕೆಟ್ಟ ರಾಜಕಾರಣ ಮಾಡುವ ನೀವು ಕುರುಬರಿಗೆ ಎಷ್ಟು ಸೀಟ್ ಕೊಟ್ಟೀರಿ. ಶಂಕರ್, ಎಂ.ಟಿ.ಬಿ.ನಾಗರಾಜ್ ಕುರುಬರು ಅಂತ ಅವಕಾಶ ಕೊಟ್ಟಿಲ್ಲ. ಸರ್ಕಾರ ರಚಿಸೋಕೆ ಕಾರಣರಾದವರು ಎಂದು ಕೊಟ್ಟಿದ್ದೇವೆ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ತಿಳಿಸಿದರು.</p>.<p>‘ಧಮ್ ಇದ್ದೋರು ಮುಖ್ಯಮಂತ್ರಿಯಿದ್ದಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದೀರಿ. ಕೀಳು ಭಾಷೆ ಬಳಸಿರೋದಕ್ಕೆ ರಾಜ್ಯದ ಜನರ ಕ್ಷಮೆ ಕೋರಿ’ ಎಂದು ಈಶ್ವರಪ್ಪ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/b-s-yediyurappa-siddaramaiah-karnataka-govt-737915.html" target="_blank">ಬಿ.ಎಸ್.ಯಡಿಯೂರಪ್ಪಗೆ ಧಮ್ ಇಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ</a></p>.<p>‘ಎಚ್.ವಿಶ್ವನಾಥ್ಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>