‘ಕಾರಾಪುರ ಗ್ರಾಮದ ಸರ್ವೆ ನಂಬರ್ 142, 144ರಲ್ಲಿ ವಾಸದ ಮನೆ ಹೊರತುಪಡಿಸಿ ಹೆಚ್ಚಿನ ವಿಸ್ತೀರ್ಣದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡುಬಂದಿದೆ. ಈ ಸ್ಥಳವನ್ನು ಜುಲೈ 13ರಂದು ಪರಿಶೀಲನೆ ನಡೆಸಿದಾಗ ಕಾಮಗಾರಿ ಪ್ರಗತಿಯಲ್ಲಿರುವುದು ಕಂಡುಬಂದಿದೆ. ಬೃಹತ್ ಕಟ್ಟಡ ನಿರ್ಮಾಣ ಮಾಡಲು ಅರಣ್ಯ ಇಲಾಖೆಯಿಂದ ನಿರಾಕ್ಷೇಪಣಾ ದೃಢೀಕರಣ ಪತ್ರವನ್ನು ಪಡೆಯಬೇಕಾಗಿರುತ್ತದೆ. ಆದರೆ, ಪತ್ರ ಪಡೆಯದೇ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಾನೂನು ಬಾಹಿರವಾಗುತ್ತದೆ. 7 ದಿನಗಳೊಳಗೆ ನೋಟಿಸ್ಗೆ ಸಮಜಾಯಿಷಿ ನೀಡದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ನರಸಿಂಹಮೂರ್ತಿ ಎಂಬುವವರ ಹೆಸರಿಗೆ, ಅಂತರಸಂತೆ ವನ್ಯಜೀವಿ ವಲಯದ ಅರಣ್ಯಾಧಿಕಾರಿ ಸಿದ್ದರಾಜು ನೋಟಿಸ್ ನೀಡಿದ್ದಾರೆ.