ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪಿಲಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲು ಟೆಂಡರ್

₹ 50 ಕೋಟಿ ಅನುದಾನಕ್ಕೆ ಅನುಮೋದನೆ: ಎಸ್‌.ಟಿ.ಸೋಮಶೇಖರ್
Last Updated 18 ಆಗಸ್ಟ್ 2020, 14:34 IST
ಅಕ್ಷರ ಗಾತ್ರ

ಮೈಸೂರು: ಎಚ್‌.ಡಿ.ಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹ 50.30 ಕೋಟಿ ವೆಚ್ಚದ ಎರಡು ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಟೆಂಡರ್ ಸಹ ಕರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಕಬಿನಿ ಅಣೆಕಟ್ಟೆಯ ಕೆಳಭಾಗದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗಾಗಿ ₹ 25 ಕೋಟಿ ಮೊತ್ತದ ಅಂದಾಜಿಗೆ ಮುಖ್ಯಮಂತ್ರಿ ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ ಎಂದಿದ್ದಾರೆ.‌

ಕಬಿನಿ ಜಲಾಶಯದ ಕೂಡು ರಸ್ತೆಯನ್ನು ಸಿಮೆಂಟ್ ರಸ್ತೆಯಾಗಿ ನಿರ್ಮಿಸುವ ಕೊಲ್ಲೆಗೌಡನಹಳ್ಳಿ ವೃತ್ತದಿಂದ ಬಿದರಹಳ್ಳಿ ವೃತ್ತದವರೆಗೆ, ₹ 25.30 ಕೋಟಿ ಮೊತ್ತದ ಕಾಮಗಾರಿಗೆ 2019-20ನೇ ಸಾಲಿನ ಪರಿಶಿಷ್ಟ ಜಾತಿ/ಪಂಗಡ ಉಪ ಯೋಜನೆಯಡಿ ಕಾವೇರಿ ನೀರಾವರಿ ನಿಗಮಕ್ಕೆ ಒದಗಿಸಲಾದ ಅನುದಾನದಡಿ ಕೂಡಲೇ ಕಾಮಗಾರಿ ಕೈಗೊಳ್ಳುವ ಪ್ರಸ್ತಾವನೆಗೆ ಅನುಮೋದನೆಯನ್ನು ಯಡಿಯೂರಪ್ಪ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT