<p><strong>ಮೈಸೂರು:</strong> ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹ 50.30 ಕೋಟಿ ವೆಚ್ಚದ ಎರಡು ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಟೆಂಡರ್ ಸಹ ಕರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.</p>.<p>ಕಬಿನಿ ಅಣೆಕಟ್ಟೆಯ ಕೆಳಭಾಗದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗಾಗಿ ₹ 25 ಕೋಟಿ ಮೊತ್ತದ ಅಂದಾಜಿಗೆ ಮುಖ್ಯಮಂತ್ರಿ ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ ಎಂದಿದ್ದಾರೆ.</p>.<p>ಕಬಿನಿ ಜಲಾಶಯದ ಕೂಡು ರಸ್ತೆಯನ್ನು ಸಿಮೆಂಟ್ ರಸ್ತೆಯಾಗಿ ನಿರ್ಮಿಸುವ ಕೊಲ್ಲೆಗೌಡನಹಳ್ಳಿ ವೃತ್ತದಿಂದ ಬಿದರಹಳ್ಳಿ ವೃತ್ತದವರೆಗೆ, ₹ 25.30 ಕೋಟಿ ಮೊತ್ತದ ಕಾಮಗಾರಿಗೆ 2019-20ನೇ ಸಾಲಿನ ಪರಿಶಿಷ್ಟ ಜಾತಿ/ಪಂಗಡ ಉಪ ಯೋಜನೆಯಡಿ ಕಾವೇರಿ ನೀರಾವರಿ ನಿಗಮಕ್ಕೆ ಒದಗಿಸಲಾದ ಅನುದಾನದಡಿ ಕೂಡಲೇ ಕಾಮಗಾರಿ ಕೈಗೊಳ್ಳುವ ಪ್ರಸ್ತಾವನೆಗೆ ಅನುಮೋದನೆಯನ್ನು ಯಡಿಯೂರಪ್ಪ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹ 50.30 ಕೋಟಿ ವೆಚ್ಚದ ಎರಡು ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಟೆಂಡರ್ ಸಹ ಕರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.</p>.<p>ಕಬಿನಿ ಅಣೆಕಟ್ಟೆಯ ಕೆಳಭಾಗದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗಾಗಿ ₹ 25 ಕೋಟಿ ಮೊತ್ತದ ಅಂದಾಜಿಗೆ ಮುಖ್ಯಮಂತ್ರಿ ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ ಎಂದಿದ್ದಾರೆ.</p>.<p>ಕಬಿನಿ ಜಲಾಶಯದ ಕೂಡು ರಸ್ತೆಯನ್ನು ಸಿಮೆಂಟ್ ರಸ್ತೆಯಾಗಿ ನಿರ್ಮಿಸುವ ಕೊಲ್ಲೆಗೌಡನಹಳ್ಳಿ ವೃತ್ತದಿಂದ ಬಿದರಹಳ್ಳಿ ವೃತ್ತದವರೆಗೆ, ₹ 25.30 ಕೋಟಿ ಮೊತ್ತದ ಕಾಮಗಾರಿಗೆ 2019-20ನೇ ಸಾಲಿನ ಪರಿಶಿಷ್ಟ ಜಾತಿ/ಪಂಗಡ ಉಪ ಯೋಜನೆಯಡಿ ಕಾವೇರಿ ನೀರಾವರಿ ನಿಗಮಕ್ಕೆ ಒದಗಿಸಲಾದ ಅನುದಾನದಡಿ ಕೂಡಲೇ ಕಾಮಗಾರಿ ಕೈಗೊಳ್ಳುವ ಪ್ರಸ್ತಾವನೆಗೆ ಅನುಮೋದನೆಯನ್ನು ಯಡಿಯೂರಪ್ಪ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>