<p>ಮೈಸೂರು: ನಗರದಲ್ಲಿ ಶುಕ್ರವಾರ ವರನಟ ಡಾ.ರಾಜ್ಕುಮಾರ್ ಅವರನ್ನು ಸ್ಮರಿಸಲಾಯಿತು. ಹಲವು ಸಾಧಕರನ್ನು ಸನ್ಮಾನಿಸಿ, ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.</p>.<p>ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಡಾ.ರಾಜ್ಕುಮಾರ್ ಅವರ ಪುತ್ಥಳಿಗೆ ಡಾ.ರಾಜ್ಕುಮಾರ್ ಸೇವಾ ಸಮಿತಿ ವತಿಯಿಂದ ಪುಷ್ಪನಮನ ಸಲ್ಲಿಸಲಾಯಿತು.</p>.<p>ವಿವಿಧ ಕ್ಷೇತ್ರಗಳ ಸಾಧಕರಾದ ಅಂಬಳೆ ಶಿವಣ್ಣ, ಎಂ.ರಾಮೇಗೌಡ, ಆರ್.ಚಕ್ರಪಾಣಿ,<br />ಮಂಜುನಾಥ್, ಅಮೂಲ್ಯ, ಡಾ.ಬಿ.ಎಚ್.ಮೋಹನ್, ಪರಮೇಶ್ವರಯ್ಯ, ಜಿ.ಶ್ರೀನಾಥ್ ಬಾಬು, ಎಸ್.ಇ.ಗಿರೀಶ್<br />ಅವರಿಗೆ ಕರುನಾಡ ಕಣ್ಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. </p>.<p>ಈ ಸಂದರ್ಭದಲ್ಲಿ ಮಾತನಾಡಿದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ, ‘ಕೊರೊನಾದಂತಹ ಇಂದಿನ ಸಂದರ್ಭದಲ್ಲಿ ಮಾನವೀಯ ಮೌಲ್ಯಗಳ ಅಗತ್ಯ ಇದೆ. ಮಾನವೀಯ ಮೌಲ್ಯಗಳಿಗಾಗಿ ನಾವಿಂದು ರಾಜ್ಕುಮಾರ್ ಅವರ ಸಿನಿಮಾಗಳನ್ನು ನೋಡಲೇಬೇಕಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತಕುಮಾರ್ಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಲಕ್ಷ್ಮಿದೇವಿ, ಬಿಜೆಪಿ ಮಖಂಡ ಯಶಸ್ವಿನಿ ಸೋಮಶೇಖರ್, ಡಾ.ರಾಜ್ ಸೇವಾ ಸಮಿತಿಯ ಅಧ್ಯಕ್ಷ ಸುಚೀಂದ್ರ, ಕಾರ್ಯದರ್ಶಿ ಲೋಹಿತ್, ಮಧು ಎನ್.ಪೂಜಾರ್, ಹರೀಶ್ನಾಯ್ಡು ಇದ್ದರು.</p>.<p>ಐವರು ಸಾಧಕರಿಗೆ ಪ್ರಶಸ್ತಿ: ಕರ್ನಾಟಕ ಸೇನಾ ಪಡೆ ವತಿಯಿಂದ ಇಲ್ಲಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಡಾ.ರಾಜ್ಕುಮಾರ್ ಜನ್ಮದಿನಾಚರಣೆಯಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಐವರಿಗೆ ‘ಡಾ.ರಾಜ್ ಕನ್ನಡ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.</p>.<p>ಭರತ್ ಎಂ.ಗೌಡ, ಮಡ್ಡೀಕೆರೆ ಗೋಪಾಲ್, ಎಸ್.ಇ.ಗಿರೀಶ್, ಡಾ.ಎಸ್.ಎ.ನರಸಿಂಹೇಗೌಡ, ಬಿ.ಎಚ್.ಸತೀಶ್ಕುಮಾರ್ ಗೌರವಕ್ಕೆ ಪಾತ್ರಾದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಡಾ.ರಾಜ್ ಅಭಿಮಾನಿಗಳ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ರಾಮೇಗೌಡ, ಡಾ.ರಾಜ್ಕುಮಾರ್ ಅವರು ಗೋಕಾಕ್ ಚಳವಳಿಯಲ್ಲಿ ಪಾಲ್ಗೊಂಡ ಕ್ಷಣವನ್ನು ಸ್ಮರಿಸಿದರು.</p>.<p>ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ, ಅಖಿಲ ಕರ್ನಾಟಕ ಬ್ರಾಹ್ಮಣ ಒಕ್ಕೂಟದ ವಲಯ ಉಪಾಧ್ಯಕ್ಷ ಡಾ.ಬಿ.ಆರ್.ನಟರಾಜ್ ಜೋಯಿಸ್, ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ಗೌಡ, ಬಂಗಾರಪ್ಪ ಇದ್ದರು.</p>.<p>ಮೈಸೂರಿನ ಡಾ.ರಾಜ್ಕುಮಾರ್ ಉದ್ಯಾನದಲ್ಲಿರುವ ಡಾ.ರಾಜ್ಕುಮಾರ್ ಅವರ ಪ್ರತಿಮೆಯನ್ನು ಪಾಲಿಕೆ ಸಿಬ್ಬಂದಿಯೊಡಗೂಡಿ ಅಭಿಮಾನಿಗಳು ಶುಕ್ರವಾರ ಸ್ವಚ್ಛಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ನಗರದಲ್ಲಿ ಶುಕ್ರವಾರ ವರನಟ ಡಾ.ರಾಜ್ಕುಮಾರ್ ಅವರನ್ನು ಸ್ಮರಿಸಲಾಯಿತು. ಹಲವು ಸಾಧಕರನ್ನು ಸನ್ಮಾನಿಸಿ, ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.</p>.<p>ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಡಾ.ರಾಜ್ಕುಮಾರ್ ಅವರ ಪುತ್ಥಳಿಗೆ ಡಾ.ರಾಜ್ಕುಮಾರ್ ಸೇವಾ ಸಮಿತಿ ವತಿಯಿಂದ ಪುಷ್ಪನಮನ ಸಲ್ಲಿಸಲಾಯಿತು.</p>.<p>ವಿವಿಧ ಕ್ಷೇತ್ರಗಳ ಸಾಧಕರಾದ ಅಂಬಳೆ ಶಿವಣ್ಣ, ಎಂ.ರಾಮೇಗೌಡ, ಆರ್.ಚಕ್ರಪಾಣಿ,<br />ಮಂಜುನಾಥ್, ಅಮೂಲ್ಯ, ಡಾ.ಬಿ.ಎಚ್.ಮೋಹನ್, ಪರಮೇಶ್ವರಯ್ಯ, ಜಿ.ಶ್ರೀನಾಥ್ ಬಾಬು, ಎಸ್.ಇ.ಗಿರೀಶ್<br />ಅವರಿಗೆ ಕರುನಾಡ ಕಣ್ಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. </p>.<p>ಈ ಸಂದರ್ಭದಲ್ಲಿ ಮಾತನಾಡಿದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ, ‘ಕೊರೊನಾದಂತಹ ಇಂದಿನ ಸಂದರ್ಭದಲ್ಲಿ ಮಾನವೀಯ ಮೌಲ್ಯಗಳ ಅಗತ್ಯ ಇದೆ. ಮಾನವೀಯ ಮೌಲ್ಯಗಳಿಗಾಗಿ ನಾವಿಂದು ರಾಜ್ಕುಮಾರ್ ಅವರ ಸಿನಿಮಾಗಳನ್ನು ನೋಡಲೇಬೇಕಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತಕುಮಾರ್ಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಲಕ್ಷ್ಮಿದೇವಿ, ಬಿಜೆಪಿ ಮಖಂಡ ಯಶಸ್ವಿನಿ ಸೋಮಶೇಖರ್, ಡಾ.ರಾಜ್ ಸೇವಾ ಸಮಿತಿಯ ಅಧ್ಯಕ್ಷ ಸುಚೀಂದ್ರ, ಕಾರ್ಯದರ್ಶಿ ಲೋಹಿತ್, ಮಧು ಎನ್.ಪೂಜಾರ್, ಹರೀಶ್ನಾಯ್ಡು ಇದ್ದರು.</p>.<p>ಐವರು ಸಾಧಕರಿಗೆ ಪ್ರಶಸ್ತಿ: ಕರ್ನಾಟಕ ಸೇನಾ ಪಡೆ ವತಿಯಿಂದ ಇಲ್ಲಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಡಾ.ರಾಜ್ಕುಮಾರ್ ಜನ್ಮದಿನಾಚರಣೆಯಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಐವರಿಗೆ ‘ಡಾ.ರಾಜ್ ಕನ್ನಡ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.</p>.<p>ಭರತ್ ಎಂ.ಗೌಡ, ಮಡ್ಡೀಕೆರೆ ಗೋಪಾಲ್, ಎಸ್.ಇ.ಗಿರೀಶ್, ಡಾ.ಎಸ್.ಎ.ನರಸಿಂಹೇಗೌಡ, ಬಿ.ಎಚ್.ಸತೀಶ್ಕುಮಾರ್ ಗೌರವಕ್ಕೆ ಪಾತ್ರಾದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಡಾ.ರಾಜ್ ಅಭಿಮಾನಿಗಳ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ರಾಮೇಗೌಡ, ಡಾ.ರಾಜ್ಕುಮಾರ್ ಅವರು ಗೋಕಾಕ್ ಚಳವಳಿಯಲ್ಲಿ ಪಾಲ್ಗೊಂಡ ಕ್ಷಣವನ್ನು ಸ್ಮರಿಸಿದರು.</p>.<p>ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ, ಅಖಿಲ ಕರ್ನಾಟಕ ಬ್ರಾಹ್ಮಣ ಒಕ್ಕೂಟದ ವಲಯ ಉಪಾಧ್ಯಕ್ಷ ಡಾ.ಬಿ.ಆರ್.ನಟರಾಜ್ ಜೋಯಿಸ್, ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ಗೌಡ, ಬಂಗಾರಪ್ಪ ಇದ್ದರು.</p>.<p>ಮೈಸೂರಿನ ಡಾ.ರಾಜ್ಕುಮಾರ್ ಉದ್ಯಾನದಲ್ಲಿರುವ ಡಾ.ರಾಜ್ಕುಮಾರ್ ಅವರ ಪ್ರತಿಮೆಯನ್ನು ಪಾಲಿಕೆ ಸಿಬ್ಬಂದಿಯೊಡಗೂಡಿ ಅಭಿಮಾನಿಗಳು ಶುಕ್ರವಾರ ಸ್ವಚ್ಛಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>