ಇದೇ ಸಂದರ್ಭದಲ್ಲಿ ಕನ್ನಡ ಕಲಿತ ಸಿಎಫ್ಟಿಆರ್ಐನ ಕನ್ನಡೇತರ ಸಿಬ್ಬಂದಿಗೆ ಪ್ರಮಾಣಪತ್ರಗಳನ್ನು ನಿರ್ದೇಶಕ ಡಾ.ಕೆ.ಎಸ್.ಎಂ.ಎಸ್.ರಾಘವರಾವ್ ವಿತರಿಸಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಮುರುಳೀಧರ ಅತಿಥಿಯಾಗಿದ್ದರು. ಕನ್ನಡ ಸಹೃದಯ ಬಳಗದ ಅಧ್ಯಕ್ಷ ರಂಗಧಾಮಯ್ಯ, ಉಪಾಧ್ಯಕ್ಷ ಡಾ.ಕೆ.ವೆಂಕಟೇಶಮೂರ್ತಿ, ಪ್ರಧಾನ ಕಾರ್ಯದರ್ಶಿ ಡಾ.ಆರ್.ಚೇತನ್, ಸಂಚಾಲಕ ಬಸವರಾಜ ಮುಂದಲಮನಿ, ನಿರ್ದೇಶಕರಾದ ಎಸ್.ಶಿವಪ್ಪ, ಕೆಂಪೇಗೌಡ, ಎನ್.ಚಂದ್ರಶೇಖರ್ ಭಾಗವಹಿಸಿದ್ದರು.