ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಜಿಲ್ಲಾ ಕಸಾಪ: ಮಡ್ಡೀಕೆರೆ ಗೋಪಾಲ್‌ ಅಧ್ಯಕ್ಷ

Last Updated 21 ನವೆಂಬರ್ 2021, 16:21 IST
ಅಕ್ಷರ ಗಾತ್ರ

ಮೈಸೂರು: ಮಡ್ಡೀಕೆರೆ ಗೋಪಾಲ್‌ ಅವರು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.

2008ರಿಂದ 2011ರವರೆಗೆ ಅಧ್ಯಕ್ಷರಾಗಿದ್ದ ಅವರು ಮತ್ತೊಂದು ಅವಧಿಗೆ ಜಿಲ್ಲಾ ಕಸಾಪ ಚುಕ್ಕಾಣಿ ಹಿಡಿದಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಮೂವರು ಸ್ಪರ್ಧಿಗಳು ಕಣದಲ್ಲಿದ್ದರು. ಭಾನುವಾರ ನಡೆದ ಚುನಾವಣೆಯಲ್ಲಿ ಅವರು 2,565 ಮತಗಳನ್ನು ಪಡೆದರು. 1,601 ಮತಗಳನ್ನು ಪಡೆದ ಬನ್ನೂರು ಕೆ.ರಾಜು ಎರಡನೇ ಸ್ಥಾನ‌ ಗಳಿಸಿದರು. ಕೆ.ಎಸ್‌.ನಾಗರಾಜು 1,485 ಮತಗಳನ್ನು ಪಡೆದರು.

ಜಿಲ್ಲೆಯಲ್ಲಿ ಒಟ್ಟು 13,378 ಮತದಾರರಿದ್ದು, 5,722 ಮಂದಿ ಮಾತ್ರ ಮತ ಚಲಾಯಿಸಿದ್ದರು. 71 ಮತಗಳು ತಿರಸ್ಕೃತಗೊಂಡವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT