<p><strong>ಸರಗೂರು:</strong> ಪಟ್ಟಣದಲ್ಲಿ ಪಶ್ವಿಮ ಮುಖವಾಗಿ ಹರಿಯುವ ಕಪಿಲಾ ನದಿಯಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಸ್ವಯಂ ಪ್ರೇರಿತವಾಗಿ ಪಟ್ಟಣ ಪಂಚಾಯಿತಿ ಸದಸ್ಯರು, ಬಜರಂಗದಳದ ಕಾರ್ಯಕರ್ತರು, ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರು ಹಾಗೂ ಸರ್ವೇ ರಾಜಣ್ಣ ಟ್ರಸ್ಟ್ ಅಧ್ಯಕ್ಷ ಎಸ್.ವಿ.ವೆಂಕಟೇಶ್ ಮುಂತಾದವರು ಕಿತ್ತು ಹಾಕಿ ಸ್ವಚ್ಛಗೊಳಿಸಿದರು.</p>.<p>ನದಿಯ ಅಂಚಿನಲ್ಲಿ ಗಿಡಗಂಟಿಗಳು ಹೆಚ್ಚಾಗಿದ್ದು, ಮಹಿಳೆಯರು ಬಟ್ಟೆ ತೊಳೆಯಲು, ನೀರು ತರಲು, ನದಿಗೆ ಸ್ನಾನಕ್ಕೆಂದು ಬಂದರೆ ಗಿಡಗಳು ಹೆಚ್ಚು ಬೆಳೆದಿದ್ದರಿಂದ ನದಿಗೆ ಇಳಿಯಲು ತೊಂದರೆಯಾಗುವುದನ್ನು ಕಂಡ ಸಂಘ ಸಂಸ್ಥೆಗಳು ಸ್ವಚ್ಛತೆಗೆ ಮುಂದಾಗಿದ್ದವು. ಇದಕ್ಕೆ ಕೈಜೋಡಿಸಿದ ಪಟ್ಟಣ ಪಂಚಾಯಿತಿ ಸದಸ್ಯರು, ಸುಮಾರು 40-50 ಜನ ಸ್ವಯಂ ಪ್ರೇರಣೆಯಿಂದ ಗಿಡಗಂಟಿಗಳ ತೆರವು ಮಾಡಿದರು.</p>.<p>ಬಟ್ಟೆ ಒಗೆಯುವ ಸ್ಥಳದಲ್ಲಿ ಸಮತಟ್ಟು ಮಾಡಿ ಕಲ್ಲುಗಳನ್ನು ಹಾಸಿ ಮಹಿಳೆಯರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ. ಈ ಕಾರ್ಯಕ್ಕೆ ಕಾರ್ಯಕರ್ತರು ಹಾಗೂ ಸದಸ್ಯರು ಯಾವುದೇ ಅನುದಾನ ಬಳಕೆ ಮಾಡದೆ ಸ್ವಂತ ಖರ್ಚಿನಲ್ಲಿ ಕೆಲಸ ನಿರ್ವಹಿಸಿದ್ದಾರೆ.</p>.<p>ಇನ್ನಾದರೂ ಪಟ್ಟಣ ಪಂಚಾಯಿತಿ ವತಿಯಿಂದ ಮತ್ತು ನೀರಾವರಿ ಇಲಾಖೆ, ಸಂಬಂಧಪಟ್ಟ ಇಲಾಖೆಯವರು ನದಿಯ ದಡದ ಸ್ವಚ್ಛತೆ ಬಗ್ಗೆ ಗಮನಹರಿಸಬೇಕು, ಕಪಿಲಾ ನದಿಗೆ ಸೋಪಾನಕಟ್ಟೆ ನಿರ್ಮಿಸಲು ಪಟ್ಟಣ ಪಂಚಾಯಿತಿಯಲ್ಲಿ ಹಣವನ್ನು ಮೀಸಲಿಟ್ಟು ನದಿ ಪಾತ್ರವನ್ನು ಅಭಿವೃದ್ಧಿಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>ವಾರ್ಡ್ಗಳಿಂದ ಹರಿದು ಬರುತ್ತಿರುವ ಕೊಳಚೆ ನೀರು ನದಿಗೆ ಸೇರುವುದನ್ನು ತಡೆಯಲು ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ್ ಎರಡು ದೊಡ್ಡ ಪೈಪ್ಗಳನ್ನು ತಂದು ಹಾಕಿ ನೀರು ಕಲುಷಿತವಾಗದಂತೆ ಮಾಡಿದರು.</p>.<p>‘ಕಪಿಲಾ ನದಿ ದಡದಲ್ಲಿ ಚೋಳರಕಾಲದ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನವಿದ್ದು ಇದರ ಅಭಿವೃದ್ಧಿಯಾಗಬೇಕಿದೆ. ಇದಕ್ಕೆ ಶಾಸಕ ಸಿ.ಅನಿಲ್ಕುಮಾರ್ ಅವರ ಅನುದಾನ ನೀಡಬೇಕು’ ಎಂದು ಕೋರಿದ್ದಾರೆ.</p>.<p>ಪಟ್ಟಣ ಪಂಚಾಯಿತಿ ಸದಸ್ಯರು, ಬಜರಂಗದ ದಳದ ಕಾರ್ಯಕರ್ತರು, ವಿಶ್ವ ಹಿಂದೂ ಪರಿಷತ್ತಿನ ಸದಸ್ಯರು, ಮುಖಂಡರಾದ ಎಸ್.ವಿ.ರಾಜಣ್ಣ ಮುಂತಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರಗೂರು:</strong> ಪಟ್ಟಣದಲ್ಲಿ ಪಶ್ವಿಮ ಮುಖವಾಗಿ ಹರಿಯುವ ಕಪಿಲಾ ನದಿಯಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಸ್ವಯಂ ಪ್ರೇರಿತವಾಗಿ ಪಟ್ಟಣ ಪಂಚಾಯಿತಿ ಸದಸ್ಯರು, ಬಜರಂಗದಳದ ಕಾರ್ಯಕರ್ತರು, ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರು ಹಾಗೂ ಸರ್ವೇ ರಾಜಣ್ಣ ಟ್ರಸ್ಟ್ ಅಧ್ಯಕ್ಷ ಎಸ್.ವಿ.ವೆಂಕಟೇಶ್ ಮುಂತಾದವರು ಕಿತ್ತು ಹಾಕಿ ಸ್ವಚ್ಛಗೊಳಿಸಿದರು.</p>.<p>ನದಿಯ ಅಂಚಿನಲ್ಲಿ ಗಿಡಗಂಟಿಗಳು ಹೆಚ್ಚಾಗಿದ್ದು, ಮಹಿಳೆಯರು ಬಟ್ಟೆ ತೊಳೆಯಲು, ನೀರು ತರಲು, ನದಿಗೆ ಸ್ನಾನಕ್ಕೆಂದು ಬಂದರೆ ಗಿಡಗಳು ಹೆಚ್ಚು ಬೆಳೆದಿದ್ದರಿಂದ ನದಿಗೆ ಇಳಿಯಲು ತೊಂದರೆಯಾಗುವುದನ್ನು ಕಂಡ ಸಂಘ ಸಂಸ್ಥೆಗಳು ಸ್ವಚ್ಛತೆಗೆ ಮುಂದಾಗಿದ್ದವು. ಇದಕ್ಕೆ ಕೈಜೋಡಿಸಿದ ಪಟ್ಟಣ ಪಂಚಾಯಿತಿ ಸದಸ್ಯರು, ಸುಮಾರು 40-50 ಜನ ಸ್ವಯಂ ಪ್ರೇರಣೆಯಿಂದ ಗಿಡಗಂಟಿಗಳ ತೆರವು ಮಾಡಿದರು.</p>.<p>ಬಟ್ಟೆ ಒಗೆಯುವ ಸ್ಥಳದಲ್ಲಿ ಸಮತಟ್ಟು ಮಾಡಿ ಕಲ್ಲುಗಳನ್ನು ಹಾಸಿ ಮಹಿಳೆಯರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ. ಈ ಕಾರ್ಯಕ್ಕೆ ಕಾರ್ಯಕರ್ತರು ಹಾಗೂ ಸದಸ್ಯರು ಯಾವುದೇ ಅನುದಾನ ಬಳಕೆ ಮಾಡದೆ ಸ್ವಂತ ಖರ್ಚಿನಲ್ಲಿ ಕೆಲಸ ನಿರ್ವಹಿಸಿದ್ದಾರೆ.</p>.<p>ಇನ್ನಾದರೂ ಪಟ್ಟಣ ಪಂಚಾಯಿತಿ ವತಿಯಿಂದ ಮತ್ತು ನೀರಾವರಿ ಇಲಾಖೆ, ಸಂಬಂಧಪಟ್ಟ ಇಲಾಖೆಯವರು ನದಿಯ ದಡದ ಸ್ವಚ್ಛತೆ ಬಗ್ಗೆ ಗಮನಹರಿಸಬೇಕು, ಕಪಿಲಾ ನದಿಗೆ ಸೋಪಾನಕಟ್ಟೆ ನಿರ್ಮಿಸಲು ಪಟ್ಟಣ ಪಂಚಾಯಿತಿಯಲ್ಲಿ ಹಣವನ್ನು ಮೀಸಲಿಟ್ಟು ನದಿ ಪಾತ್ರವನ್ನು ಅಭಿವೃದ್ಧಿಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>ವಾರ್ಡ್ಗಳಿಂದ ಹರಿದು ಬರುತ್ತಿರುವ ಕೊಳಚೆ ನೀರು ನದಿಗೆ ಸೇರುವುದನ್ನು ತಡೆಯಲು ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ್ ಎರಡು ದೊಡ್ಡ ಪೈಪ್ಗಳನ್ನು ತಂದು ಹಾಕಿ ನೀರು ಕಲುಷಿತವಾಗದಂತೆ ಮಾಡಿದರು.</p>.<p>‘ಕಪಿಲಾ ನದಿ ದಡದಲ್ಲಿ ಚೋಳರಕಾಲದ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನವಿದ್ದು ಇದರ ಅಭಿವೃದ್ಧಿಯಾಗಬೇಕಿದೆ. ಇದಕ್ಕೆ ಶಾಸಕ ಸಿ.ಅನಿಲ್ಕುಮಾರ್ ಅವರ ಅನುದಾನ ನೀಡಬೇಕು’ ಎಂದು ಕೋರಿದ್ದಾರೆ.</p>.<p>ಪಟ್ಟಣ ಪಂಚಾಯಿತಿ ಸದಸ್ಯರು, ಬಜರಂಗದ ದಳದ ಕಾರ್ಯಕರ್ತರು, ವಿಶ್ವ ಹಿಂದೂ ಪರಿಷತ್ತಿನ ಸದಸ್ಯರು, ಮುಖಂಡರಾದ ಎಸ್.ವಿ.ರಾಜಣ್ಣ ಮುಂತಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>