‘ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರ್ಯಾಲಿಯು ರೈಲು ನಿಲ್ದಾಣ, ಕೆ.ಆರ್.ಆಸ್ಪತ್ರೆ ವೃತ್ತ, ಗಾಂಧಿ ಚೌಕ, ಹಾರ್ಡಿಂಗ್ ವೃತ್ತ, ಬಸವೇಶ್ವರ ವೃತ್ತ, ರಾಮಸ್ವಾಮಿ ವೃತ್ತ, ಅಗ್ನಿಶಾಮಕ ದಳದ ಜಂಕ್ಷನ್, ಸರಸ್ವತಿಪುರಂನ 1ನೇ ಮುಖ್ಯರಸ್ತೆಯಿಂದ ವಿಶ್ವ ಮಾನವ ಜೋಡಿ ರಸ್ತೆ ಮೂಲಕ ರೋಟರಿ ಪಶ್ಚಿಮದವರೆಗೆ ನಡೆಯಲಿದೆ. ಇದರಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಎಲ್ಲರೂ ಸಂಚಾರ ನಿಯಮಗಳನ್ನು ಪಾಲಿಸಬೇಕು’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪಿ.ದಿವಾಕರ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.