<p><strong>ಮೈಸೂರು:</strong> ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರವು ವಾಪಸ್ ಪಡೆಯುವವರೆಗೆ ಹೋರಾಟ ಮಾಡಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಮುಖಂಡರು ಶನಿವಾರ ಇಲ್ಲಿ ಎಚ್ಚರಿಕೆ ನೀಡಿದರು.</p>.<p>ಸ್ವರಾಜ್ ಇಂಡಿಯಾ, ಜನಾಂದೋಲನ ಮಹಾಮೈತ್ರಿ, ಜನಚೇತನ ಟ್ರಸ್ಟ್ ಸಹಯೋಗದಲ್ಲಿ ನಡೆದ ‘ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಖಾಸಗೀಕರಣದ ನೀತಿಗಳು– ಪರಿಣಾಮ ಮತ್ತು ಸವಾಲುಗಳು’ ಕುರಿತ ವಿಚಾರಗೋಷ್ಠಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.</p>.<p>ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ‘ಭೂಸುಧಾರಣೆ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕವಾದ ಕಾನೂನು. ಈ ವಿಚಾರವನ್ನು ಹಳ್ಳಿಹಳ್ಳಿಗಳಿಗೆ ತಲುಪಿಸಿ ಜನರನ್ನು ಎಚ್ಚರಿಸಬೇಕಿದೆ. ಇದನ್ನು ಜಾರಿಗೊಳಿಸಲು ಯಾವುದೇ ಕಾರಣಕ್ಕೂ ಬಿಡಬಾರದು’ ಎಂದರು.</p>.<p>‘ಸಂವಿಧಾನ, ಪ್ರಜಾಪ್ರಭುತ್ವ, ಮೀಸಲಾತಿ ಇರಬಾರದು ಎಂಬುದು ಕೇಂದ್ರ ಸರ್ಕಾರದ ಹುನ್ನಾರ. ಇದಕ್ಕಾಗಿ ಎಲ್ಲಾ ಕ್ಷೇತ್ರಗಳನ್ನು ಖಾಸಗೀಕರಣ ಮಾಡುತ್ತಾ ಸಾಗಿದೆ. ಇದರ ವಿರುದ್ಧ ರೈತ ಸಂಘಟನೆ ಹಾಗೂ ದಲಿತ ಸಂಘರ್ಷ ಸಮಿತಿಗಳು ಒಂದುಗೂಡಿ ಹೋರಾಟ ನಡೆಸಬೇಕಿದೆ’ ಎಂದು ಹೇಳಿದರು.</p>.<p>ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವ್ಯಾಪಾರೀಕರಣದ ರಾಜಕೀಯ ನಡೆಸುತ್ತಿವೆ. ಸರ್ಕಾರದ ಆಸ್ತಿಗಳನ್ನು ಖಾಸಗೀಕರಣಗೊಳಿಸುತ್ತಿವೆ’ ಎಂದು ದೂರಿದರು.</p>.<p>‘ಭೂಮಿ ಕಳೆದುಕೊಂಡರೆ ನಮ್ಮ ಅಸ್ತಿತ್ವ ಕಳೆದು ಹೋಗುತ್ತದೆ. ಇಡೀ ಸಮಾಜ ದಾಸ್ಯಕ್ಕೆ ಹೋಗಿ ಭಿಕ್ಷೆ ಬೇಡುವ ಪರಿಸ್ಥಿತಿ ಉಂಟಾಗುತ್ತದೆ’ ಎಂಬ ಆತಂಕ ವ್ಯಕ್ತಪಡಿಸಿದರು.</p>.<p>‘ಸೆ.21ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ವಿಚಾರವಾಗಿ ಚರ್ಚೆ ನಡೆದು, ಸುಗ್ರೀವಾಜ್ಞೆ ವಾಪಸ್ ಪಡೆಯುವ ರೀತಿಯಲ್ಲಿ ನಾವು ಹೊರಗಿನಿಂದ ಒತ್ತಡ ಹಾಕಬೇಕು’ ಎಂದು ಅಭಿಪ್ರಾಯ ಪಟ್ಟರು.</p>.<p>ಕೃಷಿ ತಜ್ಞ ಡಾ.ಪ್ರಕಾಶ್ ಕಮ್ಮರಡಿ ಮಾತನಾಡಿ, ‘ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಹಾಗೂ ಖಾಸಗೀಕರಣವು ಕೊರೊನಾಗಿಂತ ದೊಡ್ಡ ಮಹಾಮಾರಿ. ಇದರಿಂದ ರೈತರ ಬದುಕಿಗೆ, ಮಣ್ಣಿನ ವಾಸನೆಗೆ, ಆರ್ಥಿಕತೆಗೆ ದೊಡ್ಡ ಕಂಟಕ ಎದುರಾಗಿದೆ’ ಎಂದರು.</p>.<p>‘ಯಾವುದೇ ಚರ್ಚೆ ನಡೆಸದೆ ಕೆಲ ಕಾಯ್ದೆಗಳಿಗೆ ತಿದ್ದುಪಡಿ ತರಲಾಗುತ್ತಿದೆ. ಇದುವರೆಗೆ ದೇಶ ನಮ್ಮದು, ನಿಮ್ಮದು ಆಗಿತ್ತು. ಮುಂದೆ ಅಂಬಾನಿ, ಅದಾನಿ ಪಾಲಾಗಲಿದೆ’ ಎಂದು ಹೇಳಿದರು.</p>.<p>ಆಲಗೂಡು ಶಿವಕುಮಾರ್, ಬೆಟ್ಟಯ್ಯಕೋಟೆ, ಎನ್.ಪುನೀತ್, ವೀರಸಂಗಯ್ಯ, ಪ್ರಕಾಶ್, ನಾಗರಾಜ್, ಮಲ್ಲಯ್ಯ, ಶಂಕರಪ್ಪ, ಲಕ್ಷ್ಮೀನಾರಾಯಣ, ಎಂ.ರಾಮು ಚನ್ನಪಟ್ಟಣ, ರಾಮಕೃಷ್ಣಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರವು ವಾಪಸ್ ಪಡೆಯುವವರೆಗೆ ಹೋರಾಟ ಮಾಡಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಮುಖಂಡರು ಶನಿವಾರ ಇಲ್ಲಿ ಎಚ್ಚರಿಕೆ ನೀಡಿದರು.</p>.<p>ಸ್ವರಾಜ್ ಇಂಡಿಯಾ, ಜನಾಂದೋಲನ ಮಹಾಮೈತ್ರಿ, ಜನಚೇತನ ಟ್ರಸ್ಟ್ ಸಹಯೋಗದಲ್ಲಿ ನಡೆದ ‘ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಖಾಸಗೀಕರಣದ ನೀತಿಗಳು– ಪರಿಣಾಮ ಮತ್ತು ಸವಾಲುಗಳು’ ಕುರಿತ ವಿಚಾರಗೋಷ್ಠಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.</p>.<p>ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ‘ಭೂಸುಧಾರಣೆ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕವಾದ ಕಾನೂನು. ಈ ವಿಚಾರವನ್ನು ಹಳ್ಳಿಹಳ್ಳಿಗಳಿಗೆ ತಲುಪಿಸಿ ಜನರನ್ನು ಎಚ್ಚರಿಸಬೇಕಿದೆ. ಇದನ್ನು ಜಾರಿಗೊಳಿಸಲು ಯಾವುದೇ ಕಾರಣಕ್ಕೂ ಬಿಡಬಾರದು’ ಎಂದರು.</p>.<p>‘ಸಂವಿಧಾನ, ಪ್ರಜಾಪ್ರಭುತ್ವ, ಮೀಸಲಾತಿ ಇರಬಾರದು ಎಂಬುದು ಕೇಂದ್ರ ಸರ್ಕಾರದ ಹುನ್ನಾರ. ಇದಕ್ಕಾಗಿ ಎಲ್ಲಾ ಕ್ಷೇತ್ರಗಳನ್ನು ಖಾಸಗೀಕರಣ ಮಾಡುತ್ತಾ ಸಾಗಿದೆ. ಇದರ ವಿರುದ್ಧ ರೈತ ಸಂಘಟನೆ ಹಾಗೂ ದಲಿತ ಸಂಘರ್ಷ ಸಮಿತಿಗಳು ಒಂದುಗೂಡಿ ಹೋರಾಟ ನಡೆಸಬೇಕಿದೆ’ ಎಂದು ಹೇಳಿದರು.</p>.<p>ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವ್ಯಾಪಾರೀಕರಣದ ರಾಜಕೀಯ ನಡೆಸುತ್ತಿವೆ. ಸರ್ಕಾರದ ಆಸ್ತಿಗಳನ್ನು ಖಾಸಗೀಕರಣಗೊಳಿಸುತ್ತಿವೆ’ ಎಂದು ದೂರಿದರು.</p>.<p>‘ಭೂಮಿ ಕಳೆದುಕೊಂಡರೆ ನಮ್ಮ ಅಸ್ತಿತ್ವ ಕಳೆದು ಹೋಗುತ್ತದೆ. ಇಡೀ ಸಮಾಜ ದಾಸ್ಯಕ್ಕೆ ಹೋಗಿ ಭಿಕ್ಷೆ ಬೇಡುವ ಪರಿಸ್ಥಿತಿ ಉಂಟಾಗುತ್ತದೆ’ ಎಂಬ ಆತಂಕ ವ್ಯಕ್ತಪಡಿಸಿದರು.</p>.<p>‘ಸೆ.21ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ವಿಚಾರವಾಗಿ ಚರ್ಚೆ ನಡೆದು, ಸುಗ್ರೀವಾಜ್ಞೆ ವಾಪಸ್ ಪಡೆಯುವ ರೀತಿಯಲ್ಲಿ ನಾವು ಹೊರಗಿನಿಂದ ಒತ್ತಡ ಹಾಕಬೇಕು’ ಎಂದು ಅಭಿಪ್ರಾಯ ಪಟ್ಟರು.</p>.<p>ಕೃಷಿ ತಜ್ಞ ಡಾ.ಪ್ರಕಾಶ್ ಕಮ್ಮರಡಿ ಮಾತನಾಡಿ, ‘ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಹಾಗೂ ಖಾಸಗೀಕರಣವು ಕೊರೊನಾಗಿಂತ ದೊಡ್ಡ ಮಹಾಮಾರಿ. ಇದರಿಂದ ರೈತರ ಬದುಕಿಗೆ, ಮಣ್ಣಿನ ವಾಸನೆಗೆ, ಆರ್ಥಿಕತೆಗೆ ದೊಡ್ಡ ಕಂಟಕ ಎದುರಾಗಿದೆ’ ಎಂದರು.</p>.<p>‘ಯಾವುದೇ ಚರ್ಚೆ ನಡೆಸದೆ ಕೆಲ ಕಾಯ್ದೆಗಳಿಗೆ ತಿದ್ದುಪಡಿ ತರಲಾಗುತ್ತಿದೆ. ಇದುವರೆಗೆ ದೇಶ ನಮ್ಮದು, ನಿಮ್ಮದು ಆಗಿತ್ತು. ಮುಂದೆ ಅಂಬಾನಿ, ಅದಾನಿ ಪಾಲಾಗಲಿದೆ’ ಎಂದು ಹೇಳಿದರು.</p>.<p>ಆಲಗೂಡು ಶಿವಕುಮಾರ್, ಬೆಟ್ಟಯ್ಯಕೋಟೆ, ಎನ್.ಪುನೀತ್, ವೀರಸಂಗಯ್ಯ, ಪ್ರಕಾಶ್, ನಾಗರಾಜ್, ಮಲ್ಲಯ್ಯ, ಶಂಕರಪ್ಪ, ಲಕ್ಷ್ಮೀನಾರಾಯಣ, ಎಂ.ರಾಮು ಚನ್ನಪಟ್ಟಣ, ರಾಮಕೃಷ್ಣಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>