ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳೆದ ವರ್ಷದ ದಸರೆಯ ಅನುದಾನ ₹ 8.25 ಕೋಟಿ ಬಾಕಿ: ಸಚಿವ ಎಸ್.ಟಿ. ಸೋಮಶೇಖರ್

₹ 10 ಕೋಟಿ ಒಳಗೆ ಖರ್ಚು ಮಾಡುವಂತೆ ಸಿ.ಎಂ ಸೂಚನೆ
Last Updated 18 ಸೆಪ್ಟೆಂಬರ್ 2020, 11:14 IST
ಅಕ್ಷರ ಗಾತ್ರ

ಮೈಸೂರು: ಕಳೆದ ಬಾರಿ ನಡೆದ ದಸರೆಯ ಅನುದಾನದಲ್ಲಿ ₹ 8.25 ಕೋಟಿ ಇನ್ನೂ ನೀಡಬೇಕಿದೆ. ₹ 10 ಕೋಟಿ ಒಳಗೆ ಆದಷ್ಟು ಸರಳವಾಗಿ ದಸರೆ ಆಚರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಹೀಗಾಗಿ, ದುಂದುವೆಚ್ಚ ಮಾಡುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ತಿಳಿಸಿದರು.

‘ಸಾಂಸ್ಕೃತಿಕ ಕಾರ್ಯಕ್ರಮಗಳು 10 ದಿನ ನಡೆಯಬೇಕಿದೆ. ನೀವೇ ಪ್ರಾಯೋಜಕತ್ವ ವಹಿಸಿಕೊಳ್ಳುತ್ತೇವೆ ಎಂದು ಹೇಳಿದರೆ ಮುಖ್ಯಮಂತ್ರಿ ಬಳಿ ಹಣ ಕೇಳುವುದಿಲ್ಲ’ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಆರ್ಥಿಕ ಸ್ಪಂದನ’ ಕಾರ್ಯಕ್ರಮದಡಿ ₹ 39 ಸಾವಿರ ಕೋಟಿ ರೂಪಾಯಿ ಸಾಲವನ್ನು ರೈತರು, ಅತಿ ಸಣ್ಣ ಉದ್ಯಮಿಗಳಿಗೆ ನೀಡಲಾಗುತ್ತಿದೆ. ಈಗಾಗಲೇ ಬೆಂಗಳೂರು ವಿಭಾಗದಲ್ಲಿ ಚಾಲನೆ ನೀಡಲಾಗಿದೆ. ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳಲ್ಲಿ ಶೀಘ್ರವಾಗಿ ಪ್ರ‍ಾರಂಭಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT