ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಚಿವ ಈಶ್ವರಪ್ಪ ಅವರ ಪುತ್ರ ಕಾಂತೇಶ್, ಬೆಂಗಳೂರಿನಲ್ಲಿ ಕೈಗಾರಿಕೆ ಸ್ಥಾಪಿಸುವ ಉದ್ದೇಶದಿಂದ ನಾಲ್ಕು ಕಡೆ ನಿವೇಶನ ಖರೀದಿಸಿದ್ದಾರೆ. ಆ ದುಡ್ಡು ಎಲ್ಲಿಂದ ಬಂತು? ಯಾವೆಲ್ಲಾ ಕೈಗಾರಿಕೆ ಸ್ಥಾಪಿಸುತ್ತೀರಿ ಎಂಬುದನ್ನು ಬಹಿರಂಗಪಡಿಸಿ. ಸರ್ಕಾರಿ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ನಿಮ್ಮ ಮಗನ ಹೆಸರಿಗೆ ಆಸ್ತಿ ನೋಂದಣಿ ಮಾಡಿಸಿದ್ದೀರಿ. ಈ ಬಗ್ಗೆ ಇ.ಡಿ ಹಾಗೂ ಐ.ಟಿ ತನಿಖೆ ನಡೆಯಲಿ’ ಎಂದು ಆಗ್ರಹಿಸಿದರು.