<p><strong>ಮೈಸೂರು:</strong> ‘ಕುರುಬ ಸಮುದಾಯಕ್ಕೆ ಸೇರಿದ ಒಬ್ಬರನ್ನೂ ಸಿದ್ದರಾಮಯ್ಯ ಬೆಳೆಸಲಿಲ್ಲ. ನೆಪ ಮಾತ್ರಕ್ಕೆ ತಾತ್ಕಾಲಿಕವಾಗಿ ಕೆಲವರನ್ನಷ್ಟೇ ಸಚಿವರನ್ನಾಗಿ ಮಾಡಿದರೇ ಹೊರತು ಪೂರ್ಣಾವಧಿಯಲ್ಲಿ ಯಾರಿಗೂ ಸಚಿವ ಸ್ಥಾನ ನೀಡಲಿಲ್ಲ’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು.</p>.<p>ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ ಗುರುವಾರ ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಬಂದು ಪೂಜೆ ಸಲ್ಲಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಬಾರಿ ಬಿಜೆಪಿಯಿಂದ ರಾಷ್ಟ್ರವಾದಿಯನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ’ ಎಂದು ತಿಳಿಸಿದರು.<br /><br />ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತದೆ. ಆಗ ಜಾತಿ ವಿಚಾರ ಬರುವುದಿಲ್ಲ. ರಾಷ್ಟ್ರವಾದಿಯೊಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<br /><br />ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ ಆಗುವುದಿಲ್ಲ ಅಂತ ಬಿಂಬಿಸಲಾಗಿತ್ತು. ಹೈಕಮಾಂಡ್ ನನ್ನನ್ನು ಹೇಗೆ ಪರಿಗಣಿಸಿದೆ ಅಂತ ಈಗ ಎಲ್ಲರಿಗೂ ಗೊತ್ತಾಗಿದೆ ಎಂದರು.<br /><br />ಬಸವರಾಜ ಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರೇ ಹಸಿವಿನಿಂದ ಒದ್ದಾಡುತ್ತಿರುವ ಇಲಿ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.<br /><br />ಸಿದ್ದರಾಮಯ್ಯ ಹುಲಿಯಾಗುತ್ತಾರೆ ಅಂದುಕೊಂಡಿದ್ದೆವು. ಆದರೆ ಅವರು ಇಲಿಯಾಗಿ ವಿಲ ವಿಲ ಒದ್ದಾಡುತ್ತಿದ್ದಾರೆ. ಅವರು ರಾಜ್ಯಕ್ಕೆ ಹುಲಿಯಾಗುವ ಬದಲು ಡಿ.ಕೆ.ಶಿವಕುಮಾರ್ ಮೇಲೆ ಹುಲಿಯಾಗಿದ್ದಾರೆ ಎಂದು ಚಾಟಿ ಬೀಸಿದರು.<br /><br />ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ಅಡ್ಡಿಯಾಗುತ್ತಾರೆಂದು ಸೋಲಿಸಿದರು. ಈ ಮಾತನ್ನು ನಾನು<br />ಚಾಮುಂಡಿ ಬೆಟ್ಟದಲ್ಲಿ ನಿಂತು ಹೇಳುತ್ತಿದ್ದೇನೆ ಎಂದರು.<br /><br />ಈಗ ಬಿಜೆಪಿ ಸರ್ಕಾರದಲ್ಲಿ ಹಿಂದುಳಿದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಪೂರ್ಣ ಬಹುಮತದಿಂದ ಪಕ್ಷ ನಿಷ್ಠ ಕಾರ್ಯಕರ್ತರೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/bengaluru-city/it-raid-on-bz-zameer-ahmed-khan-house-854871.html" target="_blank"> ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಮನೆ, ಕಚೇರಿ ಮೇಲೆ ಐ.ಟಿ ದಾಳಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕುರುಬ ಸಮುದಾಯಕ್ಕೆ ಸೇರಿದ ಒಬ್ಬರನ್ನೂ ಸಿದ್ದರಾಮಯ್ಯ ಬೆಳೆಸಲಿಲ್ಲ. ನೆಪ ಮಾತ್ರಕ್ಕೆ ತಾತ್ಕಾಲಿಕವಾಗಿ ಕೆಲವರನ್ನಷ್ಟೇ ಸಚಿವರನ್ನಾಗಿ ಮಾಡಿದರೇ ಹೊರತು ಪೂರ್ಣಾವಧಿಯಲ್ಲಿ ಯಾರಿಗೂ ಸಚಿವ ಸ್ಥಾನ ನೀಡಲಿಲ್ಲ’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು.</p>.<p>ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ ಗುರುವಾರ ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಬಂದು ಪೂಜೆ ಸಲ್ಲಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಬಾರಿ ಬಿಜೆಪಿಯಿಂದ ರಾಷ್ಟ್ರವಾದಿಯನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ’ ಎಂದು ತಿಳಿಸಿದರು.<br /><br />ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತದೆ. ಆಗ ಜಾತಿ ವಿಚಾರ ಬರುವುದಿಲ್ಲ. ರಾಷ್ಟ್ರವಾದಿಯೊಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<br /><br />ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ ಆಗುವುದಿಲ್ಲ ಅಂತ ಬಿಂಬಿಸಲಾಗಿತ್ತು. ಹೈಕಮಾಂಡ್ ನನ್ನನ್ನು ಹೇಗೆ ಪರಿಗಣಿಸಿದೆ ಅಂತ ಈಗ ಎಲ್ಲರಿಗೂ ಗೊತ್ತಾಗಿದೆ ಎಂದರು.<br /><br />ಬಸವರಾಜ ಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರೇ ಹಸಿವಿನಿಂದ ಒದ್ದಾಡುತ್ತಿರುವ ಇಲಿ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.<br /><br />ಸಿದ್ದರಾಮಯ್ಯ ಹುಲಿಯಾಗುತ್ತಾರೆ ಅಂದುಕೊಂಡಿದ್ದೆವು. ಆದರೆ ಅವರು ಇಲಿಯಾಗಿ ವಿಲ ವಿಲ ಒದ್ದಾಡುತ್ತಿದ್ದಾರೆ. ಅವರು ರಾಜ್ಯಕ್ಕೆ ಹುಲಿಯಾಗುವ ಬದಲು ಡಿ.ಕೆ.ಶಿವಕುಮಾರ್ ಮೇಲೆ ಹುಲಿಯಾಗಿದ್ದಾರೆ ಎಂದು ಚಾಟಿ ಬೀಸಿದರು.<br /><br />ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ಅಡ್ಡಿಯಾಗುತ್ತಾರೆಂದು ಸೋಲಿಸಿದರು. ಈ ಮಾತನ್ನು ನಾನು<br />ಚಾಮುಂಡಿ ಬೆಟ್ಟದಲ್ಲಿ ನಿಂತು ಹೇಳುತ್ತಿದ್ದೇನೆ ಎಂದರು.<br /><br />ಈಗ ಬಿಜೆಪಿ ಸರ್ಕಾರದಲ್ಲಿ ಹಿಂದುಳಿದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಪೂರ್ಣ ಬಹುಮತದಿಂದ ಪಕ್ಷ ನಿಷ್ಠ ಕಾರ್ಯಕರ್ತರೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/bengaluru-city/it-raid-on-bz-zameer-ahmed-khan-house-854871.html" target="_blank"> ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಮನೆ, ಕಚೇರಿ ಮೇಲೆ ಐ.ಟಿ ದಾಳಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>