ಮೈಸೂರು: ಸಿದ್ದರಾಮಯ್ಯರಿಗೆ ಕೋವಿಡ್ ಬಂದ ಮೇಲೆ ತಾವು ಏನು ಮಾತನಾಡುತ್ತಿದ್ದೇನೆ ಎಂಬುದೆ ಅವರಿಗೆ ಗೊತ್ತಾಗುತ್ತಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಲೇವಡಿ ಮಾಡಿದರು.
‘ಸಿದ್ದರಾಮಯ್ಯ ಅವರಿಗೆ ತಾಲಿಬಾನ್ ಏನೆಂದು ಗೊತ್ತಿಲ್ಲ, ಬಿಜೆಪಿ, ಆರ್ಎಸ್ಎಸ್ ಏನು ಎಂದು ಗೊತ್ತಿಲ್ಲ. ಯಾವುದಕ್ಕು ಯಾವ ಸಂಬಂಧವು ಇಲ್ಲದೆ ಏನೇನೋ ಮಾತನಾಡುತ್ತಿದ್ದಾರೆ. ಆರ್ಎಸ್ಎಸ್ ಬಗ್ಗೆ ತಿಳಿಯಬೇಕಾದರೆ ಯಾವುದಾದರು ಆರ್ಎಸ್ಎಸ್ ಶಾಖೆಗೆ ಬರಲಿ. ನಾನೆ ಅವರನ್ನು ಖುದ್ದಾಗಿ ಒಂದು ಶಾಖೆಗೆ ಕರೆದುಕೊಂಡು ಹೋಗುತ್ತೇನೆ’ ಎಂದು ಹೇಳಿದರು.