<p><strong>ಮೈಸೂರು: </strong>ವಿಧಾನ ಪರಿಷತ್ಗೆ ಚುನಾವಣೆಯಲ್ಲಿ ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಅವರ ನಾಮಪತ್ರ ಗುರುವಾರ ಪುರಸ್ಕೃತಗೊಂಡಿದೆ. ಪಕ್ಷದ ನಾಯಕರಲ್ಲಿ ನಿರಾಳ ಭಾವ ಮೂಡಿದೆ.</p>.<p>ತಿಮ್ಮಯ್ಯ ಅವರ ನಾಮಪತ್ರದಲ್ಲಿ ದೋಷವಿದೆ ಎಂದು ಬಿಜೆಪಿ ಅಭ್ಯರ್ಥಿ ಆರ್.ರಘು (ಕೌಟಿಲ್ಯ) ಬುಧವಾರ ಆಕ್ಷೇಪಣೆ ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಗುರುವಾರ ಎರಡೂ ಕಡೆಯವರ ವಾದ ಪ್ರತಿವಾದ ಆಲಿಸಿ, ನಾಮಪತ್ರ ಕ್ರಮಬದ್ಧವಾಗಿರುವುದಾಗಿ ಪ್ರಕಟಿಸಿದರು.</p>.<p>‘ಬಿಜೆಪಿ ಅಭ್ಯರ್ಥಿಯ ಮೂರೂ ಆಕ್ಷೇಪಣೆಗಳನ್ನು ಚುನಾವಣಾಧಿಕಾರಿ ತಳ್ಳಿಹಾಕಿದ್ದಾರೆ. ಅಭ್ಯರ್ಥಿಯ ನಾಮಪತ್ರ ಅಂಗೀಕರಿಸಿದ್ದಾರೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಪರ ವಾದ ಮಂಡಿಸಿದ ಹೈಕೋರ್ಟ್ನ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಹೇಳಿದರು.</p>.<p>‘ಟೈಪಿಂಗ್ ವೇಳೆ ನಾಮಪತ್ರದಲ್ಲಿ ಸಣ್ಣ ಲೋಪವಾಗಿತ್ತು. ಆ ಬಗ್ಗೆ ವಕೀಲರು ಮನವರಿಕೆ ಮಾಡಿಕೊಟ್ಟರು. ನನ್ನ ನಾಮಪತ್ರ ಸ್ವೀಕೃತವಾಯಿತು. ಬಿಜೆಪಿಯವರು ಕೆಟ್ಟಮನಸ್ಸಿನವರು, ತಪ್ಪು ಹುಡುಕುವ ಕೆಲಸ ಮಾಡಿದ್ದಾರೆ’ ಎಂದು ತಿಮ್ಮಯ್ಯ ಪ್ರತಿಕ್ರಿಯಿಸಿದರು.</p>.<p>ಬಿಜೆಪಿ ಅಭ್ಯರ್ಥಿ ಆರ್.ರಘು ಅವರು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದೆಯೇ ಚುನಾವಣೆಗೆ ಸ್ಪರ್ಧಿಸಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿರುವುದರಿಂದ, ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ.ಲಕ್ಷ್ಮಣ ಅವರು ಚುನಾವಣಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ವಿಧಾನ ಪರಿಷತ್ಗೆ ಚುನಾವಣೆಯಲ್ಲಿ ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಅವರ ನಾಮಪತ್ರ ಗುರುವಾರ ಪುರಸ್ಕೃತಗೊಂಡಿದೆ. ಪಕ್ಷದ ನಾಯಕರಲ್ಲಿ ನಿರಾಳ ಭಾವ ಮೂಡಿದೆ.</p>.<p>ತಿಮ್ಮಯ್ಯ ಅವರ ನಾಮಪತ್ರದಲ್ಲಿ ದೋಷವಿದೆ ಎಂದು ಬಿಜೆಪಿ ಅಭ್ಯರ್ಥಿ ಆರ್.ರಘು (ಕೌಟಿಲ್ಯ) ಬುಧವಾರ ಆಕ್ಷೇಪಣೆ ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಗುರುವಾರ ಎರಡೂ ಕಡೆಯವರ ವಾದ ಪ್ರತಿವಾದ ಆಲಿಸಿ, ನಾಮಪತ್ರ ಕ್ರಮಬದ್ಧವಾಗಿರುವುದಾಗಿ ಪ್ರಕಟಿಸಿದರು.</p>.<p>‘ಬಿಜೆಪಿ ಅಭ್ಯರ್ಥಿಯ ಮೂರೂ ಆಕ್ಷೇಪಣೆಗಳನ್ನು ಚುನಾವಣಾಧಿಕಾರಿ ತಳ್ಳಿಹಾಕಿದ್ದಾರೆ. ಅಭ್ಯರ್ಥಿಯ ನಾಮಪತ್ರ ಅಂಗೀಕರಿಸಿದ್ದಾರೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಪರ ವಾದ ಮಂಡಿಸಿದ ಹೈಕೋರ್ಟ್ನ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಹೇಳಿದರು.</p>.<p>‘ಟೈಪಿಂಗ್ ವೇಳೆ ನಾಮಪತ್ರದಲ್ಲಿ ಸಣ್ಣ ಲೋಪವಾಗಿತ್ತು. ಆ ಬಗ್ಗೆ ವಕೀಲರು ಮನವರಿಕೆ ಮಾಡಿಕೊಟ್ಟರು. ನನ್ನ ನಾಮಪತ್ರ ಸ್ವೀಕೃತವಾಯಿತು. ಬಿಜೆಪಿಯವರು ಕೆಟ್ಟಮನಸ್ಸಿನವರು, ತಪ್ಪು ಹುಡುಕುವ ಕೆಲಸ ಮಾಡಿದ್ದಾರೆ’ ಎಂದು ತಿಮ್ಮಯ್ಯ ಪ್ರತಿಕ್ರಿಯಿಸಿದರು.</p>.<p>ಬಿಜೆಪಿ ಅಭ್ಯರ್ಥಿ ಆರ್.ರಘು ಅವರು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದೆಯೇ ಚುನಾವಣೆಗೆ ಸ್ಪರ್ಧಿಸಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿರುವುದರಿಂದ, ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ.ಲಕ್ಷ್ಮಣ ಅವರು ಚುನಾವಣಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>