‘ಜನಸಂಖ್ಯೆ ಆಧಾರದಲ್ಲಿ ಒಳ ಮೀಸಲಾತಿ ನಿಗದಿಯಾಗಬೇಕು. ಮೀಸಲಾತಿಯ ಹೋರಾಟ ಇದೀಗ ರಾಜಕೀಯ ತಿರುವು ಪಡೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬಸವ ಅನುಯಾಯಿ ಆಗಿದ್ದರೆ, ಮೊದಲು ಹಿಂದುಳಿದ ವರ್ಗಗಳ ಆಯೋಗ ನೀಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿ ಹಾಗೂ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸಚಿವಸಂಪುಟ ಸಭೆಯಲ್ಲಿ ಅಂಗೀಕರಿಸಿ, ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಡಲಿ’ ಎಂದು ಮುನಿಯಪ್ಪ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.