ಆದರೆ, ಈಗ ‘ಕಿಸಾನ್ ಕ್ರೆಡಿಟ್ ಕಾರ್ಡ್’ ಮೂಲಕ ಬೆಳೆ ಸಾಲ ಪಡೆದರೆ, ರೈತರು ತಮಗೆ ಅಗತ್ಯ ಇದ್ದಷ್ಟು ಸಾಲದ ಹಣವನ್ನು ‘ಕ್ರೆಡಿಟ್ ಕಾರ್ಡ್’ ಮೂಲಕ ಎಟಿಎಂನಿಂದ ಪಡೆಯಬಹುದು. ಅಷ್ಟು ಹಣಕ್ಕೆ ಮಾತ್ರ ಬಡ್ಡಿ ವಿಧಿಸಲಾಗುತ್ತದೆ. ಸ್ವಲ್ಪ ದಿನದ ಮಂಜೂರಾತಿ ಹಣದಲ್ಲಿ ಬಾಕಿ ಉಳಿದಿರುವ ಮೊತ್ತವನ್ನು ಪಡೆಯಬಹುದಿತ್ತು. ಮರುಪಾವತಿ ಮಾಡಿದ ಹಣವನ್ನೂ ಯಾವುದೇ ದಾಖಲಾತಿ ಸಲ್ಲಿಸದೇ ನೇರವಾಗಿ ಕ್ರೆಡಿಟ್ ಕಾರ್ಡ್ ಮೂಲಕವೇ ಪಡೆಯಬಹುದಾಗಿದೆ. ಇದರಿಂದ ರೈತರಿಗೆ ಹೆಚ್ಚಿನ ಪ್ರಯೋಜನ ಆಗಲಿದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ವೆಂಕಟಾಚಲಪತಿ ತಿಳಿಸಿದರು.