ಕಾರ್ಮಿಕರಿಗೆ ಕಿಟ್ ವಿತರಿಸುವ ಜವಾಬ್ದಾರಿ ಹೊತ್ತಿರುವ ಇಲಾಖೆಯ ನೌಕರ ಭಾಸ್ಕರ್ ’ಪ್ರಜಾವಾಣಿ’ ಯೊಂದಿಗೆ ಮಾತನಾಡಿ, ‘ನಾವು ಎಷ್ಟೇ ವಿನಂತಿಸಿದರೂ ಕಾರ್ಮಿಕರು ನಮ್ಮ ಮಾತು ಕೇಳುತ್ತಿಲ್ಲ, ನೂಕುನುಗ್ಗಲು ಉಂಟು ಮಾಡುತ್ತಿದ್ದಾರೆ. ಪೊಲೀಸರು ಸಹ ಸ್ಥಳದಲ್ಲಿ ಇರುವುದಿಲ್ಲ ನಮಗೆ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ’ ಎಂದು ಬೇಸರದಿಂದ ಹೇಳಿದರು.