ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪಿಲಾ ನದಿಗೆ ಹಾರಿದ ಕೋವಿಡ್ ಸೋಂಕಿತ?

Last Updated 9 ಆಗಸ್ಟ್ 2020, 16:35 IST
ಅಕ್ಷರ ಗಾತ್ರ

ನಂಜನಗೂಡು (ಮೈಸೂರು): ಕೊರೊನಾ ಸೋಂಕಿಗೆ ಒಳಗಾಗಿದ್ದ ಇಲ್ಲಿನ 62 ವರ್ಷದ ವೃದ್ಧರೊಬ್ಬರು, ಹೆಜ್ಜಿಗೆ ಸೇತುವೆಯಿಂದ ಭಾನುವಾರ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮನೆಯಿಂದ ಬೆಳಿಗ್ಗೆ ಸ್ಕೂಟರ್‌ನಲ್ಲಿ ಹೊರ ಹೋಗಿದ್ದ ಇವರು ಮನೆಗೆ ಮರಳಿರಲಿಲ್ಲ. ಕುಟುಂಬದವರು ಎಲ್ಲ ಕಡೆ ಹುಡುಕಿದರೂ ಸುಳಿವು ದೊರೆತಿರಲಿಲ್ಲ. ಕೊನೆಗೆ ಚಾಮರಾಜನಗರ ಬೈಪಾಸ್ ರಸ್ತೆಯ ಹೆಜ್ಜಿಗೆ ಸೇತುವೆ ಬಳಿ ಸ್ಕೂಟರ್‌ ಪತ್ತೆಯಾಗಿದೆ. ಆದರೆ, ವ್ಯಕ್ತಿಯ ಸುಳಿವು ಸಿಕ್ಕಿಲ್ಲ.

‘ಕುಟುಂಬದವರು ಮಾಹಿತಿ ನೀಡಿದ್ದು, ಬೋಟು ಮತ್ತು ನುರಿತ ಈಜುಗಾರರ ತಂಡದೊಂದಿಗೆ ವೃದ್ಧರ ಪತ್ತೆಗೆ ಶೋಧ ನಡೆಸಲಾಗುತ್ತಿದೆ’ ಎಂದು ನಂಜನಗೂಡು ನಗರ ಠಾಣೆಯ ಪಿಎಸ್ಐ ರವಿಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT