ವಕ್ತಾರ ಲಕ್ಷ್ಮಣ್ ನೀಡಿದ ಈ ಹೇಳಿಕೆಯನ್ನು ಪತ್ರಕರ್ತರು ಪ್ರಶ್ನಿಸುತ್ತಿದ್ದಂತೆ, ‘ಕೊರೊನಾ ವೈರಸ್ ಬಗ್ಗೆ ಇಲ್ಲಿ ಪ್ರಸ್ತಾಪ ಮಾಡುವುದು ಬೇಡ. ಸೋಂಕು ನಿಯಂತ್ರಣಕ್ಕೆ ಕಾಂಗ್ರೆಸ್ ಸಹ ಜಿಲ್ಲಾಡಳಿತ, ಸರ್ಕಾರಕ್ಕೆ ಸಹಕಾರ ನೀಡಲಿದೆ. ಮಾರ್ಚ್ 31ರವರೆಗೂ ಜಿಲ್ಲೆಯಲ್ಲಿ ಪಕ್ಷದ ವತಿಯಿಂದ ಯಾವೊಂದು ಚಟುವಟಿಕೆ ನಡೆಸಲ್ಲ’ ಎಂದು ಮೈಸೂರು ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ತಿಳಿಸಿದರು.