ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಖರೀದಿಯಲ್ಲಿ ಕಮಿಷನ್ ದಂಧೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪ

Last Updated 8 ಏಪ್ರಿಲ್ 2022, 9:07 IST
ಅಕ್ಷರ ಗಾತ್ರ

ಮೈಸೂರು: ‘ನಮ್ಮ ರಾಜ್ಯದಲ್ಲೇ ಸಾಕಾಗುವಷ್ಟು ವಿದ್ಯುತ್ ಖರೀದಿ ಮಾಡುವ ಶಕ್ತಿ ಇದ್ದರೂ ಹೆಚ್ಚುವರಿ ಹಣ ನೀಡಿ ಖಾಸಗಿ ಕಂಪನಿಗಳಿಂದ ರಾಜ್ಯಸರ್ಕಾರ ವಿದ್ಯುತ್ ಖರೀದಿ ಮಾಡುತ್ತಿದೆ. ಇದೊಂದು ಕಮಿಷನ್ ದಂಧೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದರು.

ರಾಜ್ಯದಲ್ಲಿರುವ ಎಲ್ಲ ಸ್ಥಾವರಗಳನ್ನೂ ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ 14,574 ಮೆಗಾವ್ಯಾಟ್‌ನಷ್ಟು ವಿದ್ಯುತ್ ಉತ್ಪಾದಿಸಬಹುದು. 9,451 ಮೆಗಾವ್ಯಾಟ್ ಸದ್ಯದ ಬೇಡಿಕೆ‌. ಆದರೆ, ಈಗ ಕೇವಲ 6,708 ಮೆಗಾವ್ಯಾಟ್ ಮಾತ್ರ ಉತ್ಪಾದನೆಯಾಗುತ್ತಿದೆ ಎಂದು ಹೇಳಿದರು.

ಕೊರತೆಯಾಗಿರುವ ವಿದ್ಯುತ್‌ನ್ನು ಅದಾನಿ ಮಾಲೀಕತ್ವ ಹಾಗೂ ಇನ್ನಿತರೆ ಕಂಪನಿಗಳಿಂದ ಖರೀದಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಪ್ರತಿ ಯೂನಿಟ್‌ಗೆ ₹ 4.70 ದರ ನಿಗದಿ ಮಾಡಿದ್ದರೆ, ಸರ್ಕಾರ ₹ 6 ನೀಡುತ್ತಿರುವುದಾದರೂ ಏಕೆ ಎಂದು ಪ್ರಶ್ನಿಸಿದರು.

ಈ ಕುರಿತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕರ್ನಾಟಕ ಪವರ್‌ ಕಾರ್ಪೋರೇಷನ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್ ಪತ್ರ ಬರೆದಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT