<p>ಮೈಸೂರು: ಕೆ.ಆರ್.ಆಸ್ಪತ್ರೆಯಲ್ಲಿ 80 ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲು, 100 ಹಾಸಿಗೆಗಳನ್ನು ತೀವ್ರ ಉಸಿರಾಟ ಸಮಸ್ಯೆ (ಎಸ್ಎಆರ್ಐ) ಹಾಗೂ ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್ಐ) ಬಳಲುತ್ತಿರುವ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲು ಬೆಂಗಳೂರಿನ ತಜ್ಞರ ತಂಡವು ಜಿಲ್ಲಾಡಳಿತಕ್ಕೆ ಸಲಹೆ ನೀಡಿದೆ.</p>.<p>ಸೋಂಕಿನಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಕೆ.ಆರ್.ಆಸ್ಪತ್ರೆಗೆ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಪಿ.ನಂಜರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಆಸ್ಪತ್ರೆಯಲ್ಲಿ ಇದುವರೆಗೆ ಕೋವಿಡ್ನಿಂದ 15 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಐವರು ಸೋಂಕಿತರು ಇಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸಾಗಿಸಲು ಕಷ್ಟವಾಗುತ್ತಿದೆ.</p>.<p>‘ಕೆ.ಆರ್.ಆಸ್ಪತ್ರೆಗೆ ದಾಖಲಾಗಿ, ಸೋಂಕು ದೃಢಪಟ್ಟ ರೋಗಿಗಳನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸುವ ಸಂದರ್ಭದಲ್ಲಿ ಸಾವು ಸಂಭವಿಸುತ್ತಿದೆ. ಹೀಗಾಗಿ, ಸೋಂಕಿತರನ್ನು ಸ್ಥಳಾಂತರ ಮಾಡದೆ ಇಲ್ಲಿಯೇ ಚಿಕಿತ್ಸೆ ನೀಡಲು ತಜ್ಞರು ಸೂಚಿಸಿದ್ದಾರೆ’ ಎಂದೂ ಹೇಳಿದರು.</p>.<p>‘ಆಸ್ಪತ್ರೆಗೆ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಮೃತಪಟ್ಟ ಪ್ರಕರಣಗಳೂ ವರದಿಯಾಗಿವೆ. ಹೀಗಾಗಿ, ಕೋವಿಡ್ನಿಂದ ಸಾವು ಸಂಭವಿಸಿದೆಯೋ ಅಥವಾ ಕೋವಿಡ್ ಪಾಸಿಟಿವ್ ಆಗಿದ್ದು, ಬೇರೆ ಕಾರಣದಿಂದ ಸಾವು ಸಂಭವಿಸಿದೆಯೋ ಎಂಬುದನ್ನು ಪರಿಶೀಲಿಸಲು ನಾವು ತಜ್ಞರಲ್ಲಿ ಕೋರಿದ್ದೇವೆ’ ಎಂದರು.</p>.<p>ಈ ಸಂಬಂಧ ಈಗಾಗಲೇ 25 ಸಾವಿನ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಉಳಿದ ಸಾವಿನ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು.</p>.<p>ಮೆಡಿಸಿನ್ ಹಾಗೂಅನಸ್ತೇಶಿಯಾ ವಿಭಾಗದ ಮುಖ್ಯಸ್ಥರು ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಕೆ.ಆರ್.ಆಸ್ಪತ್ರೆಯಲ್ಲಿ 80 ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲು, 100 ಹಾಸಿಗೆಗಳನ್ನು ತೀವ್ರ ಉಸಿರಾಟ ಸಮಸ್ಯೆ (ಎಸ್ಎಆರ್ಐ) ಹಾಗೂ ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್ಐ) ಬಳಲುತ್ತಿರುವ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲು ಬೆಂಗಳೂರಿನ ತಜ್ಞರ ತಂಡವು ಜಿಲ್ಲಾಡಳಿತಕ್ಕೆ ಸಲಹೆ ನೀಡಿದೆ.</p>.<p>ಸೋಂಕಿನಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಕೆ.ಆರ್.ಆಸ್ಪತ್ರೆಗೆ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಪಿ.ನಂಜರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಆಸ್ಪತ್ರೆಯಲ್ಲಿ ಇದುವರೆಗೆ ಕೋವಿಡ್ನಿಂದ 15 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಐವರು ಸೋಂಕಿತರು ಇಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸಾಗಿಸಲು ಕಷ್ಟವಾಗುತ್ತಿದೆ.</p>.<p>‘ಕೆ.ಆರ್.ಆಸ್ಪತ್ರೆಗೆ ದಾಖಲಾಗಿ, ಸೋಂಕು ದೃಢಪಟ್ಟ ರೋಗಿಗಳನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸುವ ಸಂದರ್ಭದಲ್ಲಿ ಸಾವು ಸಂಭವಿಸುತ್ತಿದೆ. ಹೀಗಾಗಿ, ಸೋಂಕಿತರನ್ನು ಸ್ಥಳಾಂತರ ಮಾಡದೆ ಇಲ್ಲಿಯೇ ಚಿಕಿತ್ಸೆ ನೀಡಲು ತಜ್ಞರು ಸೂಚಿಸಿದ್ದಾರೆ’ ಎಂದೂ ಹೇಳಿದರು.</p>.<p>‘ಆಸ್ಪತ್ರೆಗೆ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಮೃತಪಟ್ಟ ಪ್ರಕರಣಗಳೂ ವರದಿಯಾಗಿವೆ. ಹೀಗಾಗಿ, ಕೋವಿಡ್ನಿಂದ ಸಾವು ಸಂಭವಿಸಿದೆಯೋ ಅಥವಾ ಕೋವಿಡ್ ಪಾಸಿಟಿವ್ ಆಗಿದ್ದು, ಬೇರೆ ಕಾರಣದಿಂದ ಸಾವು ಸಂಭವಿಸಿದೆಯೋ ಎಂಬುದನ್ನು ಪರಿಶೀಲಿಸಲು ನಾವು ತಜ್ಞರಲ್ಲಿ ಕೋರಿದ್ದೇವೆ’ ಎಂದರು.</p>.<p>ಈ ಸಂಬಂಧ ಈಗಾಗಲೇ 25 ಸಾವಿನ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಉಳಿದ ಸಾವಿನ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು.</p>.<p>ಮೆಡಿಸಿನ್ ಹಾಗೂಅನಸ್ತೇಶಿಯಾ ವಿಭಾಗದ ಮುಖ್ಯಸ್ಥರು ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>