'ಪೊಲೀಸರು 'ಬಿ' ರಿಪೋರ್ಟ್ ಹಾಕಿದ ಮೇಲೂ ಕಾಂಗ್ರೆಸ್ ನಾಯಕರು ಪ್ರಕರಣದಲ್ಲಿ ನನ್ನ ಬಗ್ಗೆ ಟೀಕೆ ಮಾಡುತ್ತಿರುವುದು ಬೇಸರ ತರಿಸಿದೆ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ, ಪ್ರಕರಣದ ತನಿಖೆಗಳು ಹೇಗೆ ನಡೆಯುತ್ತವೆ ಎಂಬುದು ಗೊತ್ತಿದ್ದರೂ 'ಬಿ' ರಿಪೋರ್ಟ್ ಬಗ್ಗೆ ಅನುಮಾನ ವ್ಯಕ್ತಪಡಿಸಿರುವುದು ಬೇಸರ ಮೂಡಿಸಿದೆ. ಅವರು ಕಾನೂನು ಪಂಡಿತ ಆಗಿದ್ದರೂ ಸುಮ್ಮನೆ ಟೀಕೆ ಮಾಡುತ್ತಿದ್ದಾರೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.