ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚಾರ್‌ ಧಾಮ್‌’ ಸುರಂಗಕ್ಕೆ ₹1,384 ಕೋಟಿ ಬಿಡುಗಡೆ

Last Updated 20 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಕೇದಾರನಾಥ, ಬದರಿನಾಥ, ಯಮುನೋತ್ರಿ ಮತ್ತು ಗಂಗೋತ್ರಿಯನ್ನು ಸಂಪರ್ಕಿಸುವ ಸಲುವಾಗಿ ತಯಾರಾಗುತ್ತಿರುವ ‘ಚಾರ್‌ ಧಾಮ್‌’ ಯೋಜನೆಯ ಸುರಂಗ ಮಾರ್ಗಕ್ಕೆ ₹1,384 ಕೋಟಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಸುರಂಗವು ಎರಡು ಪಥದ್ದಾಗಿದ್ದು, 4.5 ಕಿ.ಮೀ ಉದ್ದವಿದೆ. ಧರಸುವಿನಿಂದ ಯಮುನೋತ್ರಿಯ ನಡುವಿನ ಅಂತರವು ಈ ಸುರಂಗದಿಂದಾಗಿ 20ಕಿ.ಮೀ. ಕಡಿಮೆಯಾಗಲಿದ್ದು, ಪ್ರಯಾಣದ ಅವಧಿಯನ್ನು ಸುಮಾರು ಒಂದು ಗಂಟೆ ಕಡಿಮೆ ಮಾಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT