<p><strong>ಮೈಸೂರು: </strong>ಸರ್ಕಾರದ ಕರೆಗೆ ಓಗೊಟ್ಟು, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುತ್ತಿರುವ ನೌಕರರ ಸಂಖ್ಯೆಯಲ್ಲಿ ಸೋಮವಾರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.</p>.<p>ಇದರಿಂದ ಸಂಜೆ ಹೊತ್ತಿಗೆ ಇಲ್ಲಿನ ಕೆಎಸ್ಆರ್ಟಿಸಿ ಗ್ರಾಮಾಂತರ ಘಟಕದಿಂದ 171 ಕೆಎಸ್ಆರ್ಟಿಸಿ ಬಸ್ಗಳು ರಾಜ್ಯದ ವಿವಿಧ ಭಾಗಗಳಿಗೆ ಪ್ರಯಾಣ ಬೆಳೆಸಿದ್ದರೆ, ನಗರ ಘಟಕದಿಂದ 299 ಬಸ್ಗಳು ಬಸ್ ಸಂಚರಿಸಿವೆ.</p>.<p>ನಗರ ಘಟಕದಲ್ಲಿ ಶೇ 40ಕ್ಕೂ ಅಧಿಕ ಸಿಬ್ಬಂದಿ ಕರ್ತವ್ಯಕ್ಕೆ ಬಂದಿದ್ದರೆ, ಗ್ರಾಮಾಂತರ ಘಟಕದಲ್ಲಿ ಶೇ 30ಕ್ಕೂ ಅಧಿಕ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.</p>.<p><strong>ಖಾಸಗಿ ಬಸ್ ಮಾಲೀಕರ ಆಕ್ಷೇಪ: </strong>ಈ ಮಧ್ಯೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಏರಿಕೆಯಾಗುತ್ತಿದ್ದಂತೆ ಖಾಸಗಿ ಬಸ್ ಮಾಲೀಕರ ಆಕ್ಷೇಪವೂ ಹೆಚ್ಚಾಯಿತು. ‘ಮೊದಲು ಬಂದಿರುವುದು ನಾವು. ಈಗ ಬಂದಿರುವ ಕೆಎಸ್ಆರ್ಟಿಸಿ ಬಸ್ಗೆ ಜನರನ್ನು ಹತ್ತಿಸಬಾರದು’ ಎಂದು ತಗಾದೆ ತೆಗೆದರು.</p>.<p>ಇದರಿಂದ ಕೆಲಕಾಲ ನಿಲ್ದಾಣದಲ್ಲಿ ಜಟಾಪಟಿ ಉಂಟಾಯಿತು. ಸ್ಥಳಕ್ಕೆ ಬಂದ ಅಧಿಕಾರಿಗಳು ಖಾಸಗಿ ಬಸ್ ಮಾಲೀಕರೊಂದಿಗೆ ಸಭೆ ನಡೆಸಿದರು.</p>.<p>ಎರಡು ಖಾಸಗಿ ಬಸ್ ತೆರಳಿದ ಮೇಲೆ 1 ಕೆಎಸ್ಆರ್ಟಿಸಿ ಬಸ್ ಸಂಚರಿಸಲು ಸರ್ವಾನುಮತದ ಒಪ್ಪಿಗೆ ಪಡೆಯಲಾಯಿತು. ಈ ನಿಯಮದಡಿ ಗ್ರಾಮಾಂತರ ಘಟಕದಲ್ಲಿ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳು ಸಂಚಾರ ನಡೆಸಿವೆ.</p>.<p>ಯುಗಾದಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಇದರಿಂದ ಗ್ರಾಮಾಂತರ ಘಟಕದಿಂದ ಖಾಸಗಿ ಮತ್ತು ಕೆಎಸ್ಆರ್ಟಿಸಿ ಸೇರಿ ಒಟ್ಟು 480 ಬಸ್ಗಳು ಸೋಮವಾರ ಸಂಜೆಯವರೆಗೆ ಸಂಚರಿಸಿವೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸರ್ಕಾರದ ಕರೆಗೆ ಓಗೊಟ್ಟು, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುತ್ತಿರುವ ನೌಕರರ ಸಂಖ್ಯೆಯಲ್ಲಿ ಸೋಮವಾರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.</p>.<p>ಇದರಿಂದ ಸಂಜೆ ಹೊತ್ತಿಗೆ ಇಲ್ಲಿನ ಕೆಎಸ್ಆರ್ಟಿಸಿ ಗ್ರಾಮಾಂತರ ಘಟಕದಿಂದ 171 ಕೆಎಸ್ಆರ್ಟಿಸಿ ಬಸ್ಗಳು ರಾಜ್ಯದ ವಿವಿಧ ಭಾಗಗಳಿಗೆ ಪ್ರಯಾಣ ಬೆಳೆಸಿದ್ದರೆ, ನಗರ ಘಟಕದಿಂದ 299 ಬಸ್ಗಳು ಬಸ್ ಸಂಚರಿಸಿವೆ.</p>.<p>ನಗರ ಘಟಕದಲ್ಲಿ ಶೇ 40ಕ್ಕೂ ಅಧಿಕ ಸಿಬ್ಬಂದಿ ಕರ್ತವ್ಯಕ್ಕೆ ಬಂದಿದ್ದರೆ, ಗ್ರಾಮಾಂತರ ಘಟಕದಲ್ಲಿ ಶೇ 30ಕ್ಕೂ ಅಧಿಕ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.</p>.<p><strong>ಖಾಸಗಿ ಬಸ್ ಮಾಲೀಕರ ಆಕ್ಷೇಪ: </strong>ಈ ಮಧ್ಯೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಏರಿಕೆಯಾಗುತ್ತಿದ್ದಂತೆ ಖಾಸಗಿ ಬಸ್ ಮಾಲೀಕರ ಆಕ್ಷೇಪವೂ ಹೆಚ್ಚಾಯಿತು. ‘ಮೊದಲು ಬಂದಿರುವುದು ನಾವು. ಈಗ ಬಂದಿರುವ ಕೆಎಸ್ಆರ್ಟಿಸಿ ಬಸ್ಗೆ ಜನರನ್ನು ಹತ್ತಿಸಬಾರದು’ ಎಂದು ತಗಾದೆ ತೆಗೆದರು.</p>.<p>ಇದರಿಂದ ಕೆಲಕಾಲ ನಿಲ್ದಾಣದಲ್ಲಿ ಜಟಾಪಟಿ ಉಂಟಾಯಿತು. ಸ್ಥಳಕ್ಕೆ ಬಂದ ಅಧಿಕಾರಿಗಳು ಖಾಸಗಿ ಬಸ್ ಮಾಲೀಕರೊಂದಿಗೆ ಸಭೆ ನಡೆಸಿದರು.</p>.<p>ಎರಡು ಖಾಸಗಿ ಬಸ್ ತೆರಳಿದ ಮೇಲೆ 1 ಕೆಎಸ್ಆರ್ಟಿಸಿ ಬಸ್ ಸಂಚರಿಸಲು ಸರ್ವಾನುಮತದ ಒಪ್ಪಿಗೆ ಪಡೆಯಲಾಯಿತು. ಈ ನಿಯಮದಡಿ ಗ್ರಾಮಾಂತರ ಘಟಕದಲ್ಲಿ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳು ಸಂಚಾರ ನಡೆಸಿವೆ.</p>.<p>ಯುಗಾದಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಇದರಿಂದ ಗ್ರಾಮಾಂತರ ಘಟಕದಿಂದ ಖಾಸಗಿ ಮತ್ತು ಕೆಎಸ್ಆರ್ಟಿಸಿ ಸೇರಿ ಒಟ್ಟು 480 ಬಸ್ಗಳು ಸೋಮವಾರ ಸಂಜೆಯವರೆಗೆ ಸಂಚರಿಸಿವೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>