ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ನ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಪ್ರತಿಕ್ರಿಯಿಸಿ, ‘ನಗರ ಘಟಕದ ಅಧ್ಯಕ್ಷ ರೇವಣ್ಣ ಅವರ ನೇತೃತ್ವದಲ್ಲಿ ನಾನೂ ಸೇರಿದಂತೆ ಮುಂಚೂಣಿ ನಾಯಕರು ಕರ್ತವ್ಯಕ್ಕೆ ಹಾಜರಾಗಿದ್ದೇವೆ. ಇದರಿಂದ ನಗರ ಘಟಕದ ಕೆಎಸ್ಆರ್ಟಿಸಿ ಬಸ್ ಸೇವೆಯಲ್ಲಿ ಹೆಚ್ಚಳವಾಗಿದೆ. ಭಾನುವಾರ ಮತ್ತಷ್ಟು ಮಂದಿ ಕರ್ತವ್ಯಕ್ಕೆ ಬರುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.