<p><strong>ಮೈಸೂರು: </strong>ಕರ್ನಾಟಕ ಪ್ರದೇಶ ಕುರುಬರ ಸಂಘದ 2019-2024ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಹಾಲಿ ನಿರ್ದೇಶಕರೂ ಸ್ಪರ್ಧಿಸಿದ್ದು, ಮತ ನೀಡಿ ಎಂದು ಮನವಿ ಮಾಡಿಕೊಂಡರು.</p>.<p>ಅಭ್ಯರ್ಥಿಗಳಾದ ಬಿ.ಸುಬ್ರಹ್ಮಣ್ಯ, ಜೆ.ಗೋಪಿ, ರೇಖಾ ಪ್ರಿಯದರ್ಶಿನಿ, ಯು.ಅಭಿಲಾಷ್, ಆರ್.ನಾಗರಾಜು, ಕೆ.ಮಾದೇಗೌಡ ಹಾಲಿ ನಿರ್ದೇಶಕರಿದ್ದು, ಮತ್ತೊಂದು ಬಾರಿ ಅವಕಾಶ ಕೊಡಿ ಎಂದು ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೋರಿದರು.</p>.<p>‘ಹಿಂದಿನ ಸಾಲಿನಲ್ಲಿ ಆಯ್ಕೆಯಾಗಿದ್ದ ನಾವು ನೆನಪುಳಿಯುವ ಹಲ ಕೆಲಸಗಳನ್ನು ಮಾಡಿದ್ದೇವೆ. ನಗರದಲ್ಲಿ ₹ 25 ಕೋಟಿ ವೆಚ್ಚದಲ್ಲಿ ಕನಕ ಎಂಜಿನಿಯರಿಂಗ್ ಕಾಲೇಜು ನಿರ್ಮಾಣಕ್ಕೆ ಬಹಳಷ್ಟು ಶ್ರಮಿಸಿದ್ದು, ಮುಂದಿನ ವರ್ಷದಲ್ಲಿ ಕಾಲೇಜು ಆರಂಭವಾಗಲಿದೆ. ಸಮಾಜದ ಸಾಮಾಜಿಕ ಬೆಳವಣಿಗೆಗಾಗಿ ಸಂಘಕ್ಕೆ ಒಂದು ಕಟ್ಟಡ ನಿರ್ಮಿಸಲು ಮುಡಾದಿಂದ 27 ಗುಂಟೆ ಸಿ.ಎ.ನಿವೇಶವನ್ನು ವಸಂತನಗರದಲ್ಲಿ ಪಡೆದುಕೊಂಡಿದ್ದೇವೆ’ ಎಂದು ಹೇಳಿದರು.</p>.<p>ಜೆ.ಗೋಪಿ ಮಾತನಾಡಿ ಮುಂದಿನ ಅವಧಿಯ ರೂಪುರೇಷೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕರ್ನಾಟಕ ಪ್ರದೇಶ ಕುರುಬರ ಸಂಘದ 2019-2024ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಹಾಲಿ ನಿರ್ದೇಶಕರೂ ಸ್ಪರ್ಧಿಸಿದ್ದು, ಮತ ನೀಡಿ ಎಂದು ಮನವಿ ಮಾಡಿಕೊಂಡರು.</p>.<p>ಅಭ್ಯರ್ಥಿಗಳಾದ ಬಿ.ಸುಬ್ರಹ್ಮಣ್ಯ, ಜೆ.ಗೋಪಿ, ರೇಖಾ ಪ್ರಿಯದರ್ಶಿನಿ, ಯು.ಅಭಿಲಾಷ್, ಆರ್.ನಾಗರಾಜು, ಕೆ.ಮಾದೇಗೌಡ ಹಾಲಿ ನಿರ್ದೇಶಕರಿದ್ದು, ಮತ್ತೊಂದು ಬಾರಿ ಅವಕಾಶ ಕೊಡಿ ಎಂದು ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೋರಿದರು.</p>.<p>‘ಹಿಂದಿನ ಸಾಲಿನಲ್ಲಿ ಆಯ್ಕೆಯಾಗಿದ್ದ ನಾವು ನೆನಪುಳಿಯುವ ಹಲ ಕೆಲಸಗಳನ್ನು ಮಾಡಿದ್ದೇವೆ. ನಗರದಲ್ಲಿ ₹ 25 ಕೋಟಿ ವೆಚ್ಚದಲ್ಲಿ ಕನಕ ಎಂಜಿನಿಯರಿಂಗ್ ಕಾಲೇಜು ನಿರ್ಮಾಣಕ್ಕೆ ಬಹಳಷ್ಟು ಶ್ರಮಿಸಿದ್ದು, ಮುಂದಿನ ವರ್ಷದಲ್ಲಿ ಕಾಲೇಜು ಆರಂಭವಾಗಲಿದೆ. ಸಮಾಜದ ಸಾಮಾಜಿಕ ಬೆಳವಣಿಗೆಗಾಗಿ ಸಂಘಕ್ಕೆ ಒಂದು ಕಟ್ಟಡ ನಿರ್ಮಿಸಲು ಮುಡಾದಿಂದ 27 ಗುಂಟೆ ಸಿ.ಎ.ನಿವೇಶವನ್ನು ವಸಂತನಗರದಲ್ಲಿ ಪಡೆದುಕೊಂಡಿದ್ದೇವೆ’ ಎಂದು ಹೇಳಿದರು.</p>.<p>ಜೆ.ಗೋಪಿ ಮಾತನಾಡಿ ಮುಂದಿನ ಅವಧಿಯ ರೂಪುರೇಷೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>