<p><strong>ಮೈಸೂರು: </strong>ಜುಲೈ 29ರಿಂದ ಆಗಸ್ಟ್ 3ರವರೆಗೆ ನವದೆಹಲಿ ಯಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಭಾಗಿಯಾಗುವುದಾಗಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.</p>.<p>ಈ ವೇಳೆ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರನ್ನು ಭೇಟಿ ಮಾಡಿ, ರಸಗೊಬ್ಬರದ ಮೇಲಿನ ಜಿಎಸ್ಟಿ ತೆರಿಗೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗುವುದು ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಚಿನ್ನ, ಬೆಳ್ಳಿ ಗಿಂತ ರಸಗೊಬ್ಬರ, ಕೀಟನಾಶಕಗಳ ಮೇಲಿನ ಜಿಎಸ್ಟಿ ಹೆಚ್ಚಾಗಿದೆ. ಆಭರಣ ಖರೀದಿಸುವವರು ಬಡವರು, ರಸಗೊಬ್ಬರ ಖರೀದಿಸುವವರು ಶ್ರೀಮಂತರು ಎಂಬ ಭಾವನೆ ಸರ್ಕಾರಕ್ಕೆ ಇದ್ದಂತಿದೆ’ ಎಂದು ವ್ಯಂಗ್ಯವಾಡಿದರು.</p>.<p>‘ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವಿಕೆ ಆರಂಭ ವಾಗಿದ್ದರೂ, ಕಬ್ಬು ದರ ನಿಗದಿಯಾಗಿಲ್ಲ. ಕಬ್ಬಿನ ಉಪ ಉತ್ಪನ್ನಗಳ ಲಾಭವನ್ನು ರೈತರಿಗೆ ಹಂಚಿಕೆ ಮಾಡಿಲ್ಲ. ಕಬ್ಬಿನಿಂದ ಎಥೆನಾಲ್ ಉತ್ಪಾದಿಸಲು ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಕಡ್ಡಾಯಗೊಳಿಸಬೇಕು. ಎಥೆನಾಲ್ನಿಂದ ಬರುವ ಲಾಭವನ್ನು ರೈತರಿಗೆ ಹಂಚಿಕೆ ಮಾಡಬೇಕು’ ಎಂದರು.</p>.<p>ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಮುಖಂಡರಾದ ಬರಡನಪುರ ನಾಗರಾಜ್, ದೇವೇಂದ್ರಕುಮಾರ್, ಗಳಿಗರ ಹುಂಡಿ ವೆಂಕಟೇಶ್, ಸಾತಗಳ್ಳಿ ಬಸವರಾಜ್, ಮಹದೇವು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಜುಲೈ 29ರಿಂದ ಆಗಸ್ಟ್ 3ರವರೆಗೆ ನವದೆಹಲಿ ಯಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಭಾಗಿಯಾಗುವುದಾಗಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.</p>.<p>ಈ ವೇಳೆ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರನ್ನು ಭೇಟಿ ಮಾಡಿ, ರಸಗೊಬ್ಬರದ ಮೇಲಿನ ಜಿಎಸ್ಟಿ ತೆರಿಗೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗುವುದು ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಚಿನ್ನ, ಬೆಳ್ಳಿ ಗಿಂತ ರಸಗೊಬ್ಬರ, ಕೀಟನಾಶಕಗಳ ಮೇಲಿನ ಜಿಎಸ್ಟಿ ಹೆಚ್ಚಾಗಿದೆ. ಆಭರಣ ಖರೀದಿಸುವವರು ಬಡವರು, ರಸಗೊಬ್ಬರ ಖರೀದಿಸುವವರು ಶ್ರೀಮಂತರು ಎಂಬ ಭಾವನೆ ಸರ್ಕಾರಕ್ಕೆ ಇದ್ದಂತಿದೆ’ ಎಂದು ವ್ಯಂಗ್ಯವಾಡಿದರು.</p>.<p>‘ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವಿಕೆ ಆರಂಭ ವಾಗಿದ್ದರೂ, ಕಬ್ಬು ದರ ನಿಗದಿಯಾಗಿಲ್ಲ. ಕಬ್ಬಿನ ಉಪ ಉತ್ಪನ್ನಗಳ ಲಾಭವನ್ನು ರೈತರಿಗೆ ಹಂಚಿಕೆ ಮಾಡಿಲ್ಲ. ಕಬ್ಬಿನಿಂದ ಎಥೆನಾಲ್ ಉತ್ಪಾದಿಸಲು ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಕಡ್ಡಾಯಗೊಳಿಸಬೇಕು. ಎಥೆನಾಲ್ನಿಂದ ಬರುವ ಲಾಭವನ್ನು ರೈತರಿಗೆ ಹಂಚಿಕೆ ಮಾಡಬೇಕು’ ಎಂದರು.</p>.<p>ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಮುಖಂಡರಾದ ಬರಡನಪುರ ನಾಗರಾಜ್, ದೇವೇಂದ್ರಕುಮಾರ್, ಗಳಿಗರ ಹುಂಡಿ ವೆಂಕಟೇಶ್, ಸಾತಗಳ್ಳಿ ಬಸವರಾಜ್, ಮಹದೇವು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>